ಶಿವಮೊಗ್ಗ: ಈಶ್ವರಪ್ಪ ಬಿಜೆಪಿಯ ಡಮ್ಮಿ ಅಭ್ಯರ್ಥಿ. ಇದೆಲ್ಲ ಬಿಜೆಪಿಯ ತಂತ್ರಗಾರಿಕೆಯಾಗಿದೆ ಎಂದು ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆಲ್ಲುವ ಎಲ್ಲ ವಾತಾವರಣವಿದೆ ಎಂದರು. ಬಂಗಾರಪ್ಪ ಪತ್ನಿ ಕಣಕ್ಕೆ ಇಳಿಯುತ್ತಿದ್ದಂತೆ, ಈಶ್ವರಪ್ಪ ಟ್ರಂಪ್ ಕಾರ್ಡ್ ಬಳಕೆ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಈಶ್ವರಪ್ಪ ನಡುವೆ ಇದೊಂದು ಅಂತರಿಕ ಒಪ್ಪಂದವಾಗಿದೆ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಷಡ್ಯಂತ್ರದ ಒಂದು ಭಾಗವಾಗಿ ಈಶ್ವರಪ್ಪ ಅವರನ್ನು ಬಿಜೆಪಿಯು ಕಣಕ್ಕೆ ಇಳಿಸಿದೆ. ಕೆಎಸ್ ಈಶ್ವರಪ್ಪ ಅವರು ಹಿರಿಯ ನಾಯಕರು, ಈಗ ಇಂತಹ ಕೆಳಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಈಶ್ವರಪ್ಪ ಅವರಿಗೆ ರಾಜ್ಯಪಾಲ ಮತ್ತು ಅವರ ಮಗನಿಗೆ ಎಂಎಲ್ಸಿ ಸ್ಥಾನದ ಆಫರ್ ನೀಡಿದ್ದಾರೆ. ಈಶ್ವರಪ್ಪ ಅವರ ವಿರುದ್ಧ 40 ಪರ್ಸೆಂಟ್ ಅಸ್ತ್ರ ಬಳಕೆ ಮಾಡಲಾಗುತ್ತಿದೆ. ಬಿಜಪಿ ಈಶ್ವರಪ್ಪ ಮೇಲೆ ಒತ್ತಡ ಹಾಕಿ ಚುನಾವಣೆಗೆ ನಿಲ್ಲಿಸಿದೆ ಎಂದರು.