ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಹೊಸ ನಿಯಮವೊಂದು ತಂದಿದೆ. ಹೌದು ಕರ್ನಾಟಕ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಶಿಕ್ಷಕರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ನಡೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
RBI: ಮಾರುಕಟ್ಟೆಯಲ್ಲಿ 10, 20 ಮತ್ತು 50 ರೂಪಾಯಿ ನೋಟು ಸಿಗ್ತಿಲ್ಲ ಯಾಕೆ.? ಸಿಕ್ಕರೂ ಹಳೆಯ, ಹರಿದ ನೋಟು!
ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಇತ್ತೀಚಿನ ಅಧಿಸೂಚನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಿತ್ತು. ಆ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಹೇಳಲಾಗಿತ್ತು. ಉರ್ದು ಭಾಷೆ ಕಡ್ಡಾಯಗೊಳಿಸಿರುವ ನಿರ್ಧಾರದ ಬಗ್ಗೆ ವಿರೋಧ ಪಕ್ಷ ಬಿಜೆಪಿ ಟೀಕಿಸಿದ್ದು, ಇದು ಕಾಂಗ್ರೆಸ್ ಸರ್ಕಾರದ “ಮುಸ್ಲಿಂ ತುಷ್ಟೀಕರಣ” ಎಂದು ಆರೋಪಿಸಿದೆ. ಕನ್ನಡ ಸಂಘಟನೆಗಳು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿವೆ.
ಇಲಾಖೆ ಕಳವಳ
ಸ್ಥಳೀಯವಾಗಿ ವಿರೋಧ ವ್ಯಕ್ತವಾದ ಹಿನ್ನೆಲೆ ಮೂಡಿಗೆರೆ ಮಹಿಳಾ ಮತ್ತು ಮಕ್ಕಳ ಇಲಾಖೆಯು ಅಧಿಸೂಚನೆ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಚಿಕ್ಕಮಗಳೂರು ಉಪ ನಿರ್ದೇಶಕರಿಗೆ ಈ ಬಗ್ಗೆ ಪತ್ರ ಬರೆದು ಸ್ಥಳೀಯ ಜನಸಂಖ್ಯೆಯು ವಿವಿಧ ಸಮುದಾಯಗಳನ್ನು ಒಳಗೊಂಡಿದೆ. ಮುಸ್ಲಿಮರು 31.94 ರಷ್ಟಿದ್ದಾರೆ. ಹೀಗಾಗಿ, ಉರ್ದು ಭಾಷೆಗೆ ಒತ್ತು ನೀಡಿರುವುದು ಕನ್ನಡ ಮಾತನಾಡುವ ಅಭ್ಯರ್ಥಿಗಳನ್ನು ಕಡೆಗಣಿಸುವಂತಿದೆ. ಕನ್ನಡಿಗರಿಗೆ ಆದ್ಯತೆ ನೀಡಬೇಕು. ಸದ್ಯ ಸರಿಪಡಿಸಿ, ಸಂಪೂರ್ಣ ಕನ್ನಡದಲ್ಲಿ ಅರ್ಜಿ ನಮೂನೆ ನೀಡಬೇಕು ಎಂದು ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿಯ ಮಾಜಿ ಸಂಸದ ನಳಿನ್ಕುಮಾರ್ ಕಟೀಲ್ ” ಅಂಗನವಾಡಿ ಶಿಕ್ಷಕಿ ಕೆಲಸ ಸಿಗಬೇಕಾದರೆ ಉರ್ದು ಭಾಷೆ ಗೊತ್ತಿರಬೇಕು ಎಂಬ ರಾಜ್ಯದ ಕಾಂಗ್ರೆಸ್ ಸರಕಾರದ ಘೋಷಣೆ ಖಂಡನೀಯ. ಅಂಗನವಾಡಿ ಶಿಕ್ಷಕರ ನೇಮಕಾತಿಯಲ್ಲಿಯೂ ಮುಸ್ಲಿಂ ಸಮುದಾಯವನ್ನು ಒಲೈಸುವ, ಅವರಿಗೆ ಮಾತ್ರ ಕೆಲಸ ಸಿಗುವಂತೆ ದಾರಿ ಮಾಡಿಕೊಡುವ ಹಿಂಬಾಗಿಲ ಯತ್ನ ಮತ್ತೊಮ್ಮೆ ಕಾಂಗ್ರೆಸ್ಸಿಗರ ಕುಟಿಲ ನೀತಿ ಎತ್ತಿ ತೋರಿಸುತ್ತಿದೆ. ಅಸಹ್ಯ ರಾಜಕೀಯದ ಪರಮಾವಧಿ ” ಎಂದು ಕಿಡಿಕಾರಿದ್ದಾರೆ.