ಮುಂಬೈ ಇಂಡಿಯನ್ಸ್ ವಿರುದ್ಧ ಹೀನಾಯವಾಗಿ ಸೋತಿರುವ RCB ತಂಡದ ಬೌಲಿಂಗ್ ವಿರುದ್ಧ ಫ್ಯಾನ್ಸ್ ಆಕ್ರೋಶ ಹೊರ ಹಾಕಿದ್ದಾರೆ.
ಗಣಿನಾಡು ಬಳ್ಳಾರಿಯಲ್ಲಿ ಒಂದೇ ದಿನ ಎರಡು ಅಭ್ಯಾರ್ಥಿಗಳಿಂದ ನಾಮಪತ್ರ ಸಲ್ಲಿಕೆ
197 ರನ್ಗಳ ಬೃಹತ್ ಮೊತ್ತವನ್ನು ಮುಂಬೈ ಇಂಡಿಯನ್ಸ್ ತಂಡ 15 ಓವರ್ಗಳಲ್ಲಿ ಕೇವಲ ಮೂರು ವಿಕೆಟ್ ನಷ್ಟಕ್ಕೆ ಚೇಸ್ ಮಾಡಿದೆ. ಇದರಿಂದ ಆರ್ಸಿಬಿ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಆರ್ಸಿಬಿ ಹೀನಾಯ ಬೌಲಿಂಗ್ ಇದಕ್ಕೆ ಕಾರಣ. ಆರ್ಸಿಬಿ ತಂಡದ ನಾಯಕ ಫಾಪ್ ಡುಪ್ಲೆಸಿಸ್ ಒದ್ದೆ ಪಿಚ್ನ ದೂರಿದ್ದಾರೆ. ಇದರಿಂದ ನಮ್ಮ ಬೌಲರ್ಗಳು ಎಡವಿದರು ಎಂದಿದ್ದಾರೆ.
ಫಾಪ್ ಡುಪ್ಲೆಸಿಸ್, ರಜತ್ ಪಟಿದಾರ್ ಹಾಗೂ ದಿನೇಶ್ ಕಾರ್ತಿಕ್ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆ ಆದರು. ಅಂತಿಮವಾಗಿ 20 ಓವರ್ಗಳ ಮುಕ್ತಾಯಕ್ಕೆ ಆರ್ಸಿಬಿ 196 ರನ್ಗಳನ್ನು ಗಳಿಸಿದೆ. ಇದು ಸಣ್ಣ ಮೊತ್ತವೇನು ಅಲ್ಲ. ಆದರೆ, ಮುಂಬೈ ಇಂಡಿಯನ್ಸ್ ಆಟಗಾರರು ನೀರು ಕುಡಿದಷ್ಟೇ ಸುಲಭದಲ್ಲಿ ರನ್ ಚೇಸ್ ಮಾಡಿದರು. ಆರ್ಸಿಬಿ ಬೌಲರ್ಗಳು ಬೆವರಿ ಬೆಂಡಾದರು.
ಇಬ್ಬನಿಯಿಂದ ಪಿಚ್ ಒದ್ದೆ ಆಗಿರುವುದು ಪ್ರಮುಖ ಪಾತ್ರವಹಿಸುತ್ತದೆ ಅನ್ನೋದು ನಮಗೆ ಗೊತ್ತಿತ್ತು. ನಾವು 250+ ಸ್ಕೋರ್ ಮಾಡಬೇಕಿತ್ತು. 190 ಅನ್ನೋದು ಕೆಲವು ಸ್ಟೇಡಿಯಂಗಳಲ್ಲಿ ದೊಡ್ಡ ಮೊತ್ತ. ಆದರೆ, ವಾಂಖೆಡೆಯಲ್ಲಿ ಇದು ದೊಡ್ಡ ಮೊತ್ತವಲ್ಲ. ಇದು ತೀರಾ ಸಣ್ಣ ಮೊತ್ತ ಎಂದು ಅವರಿಗೆ ಅನಿಸಿರಬಹುದು. ಮುಂಬೈ ಬ್ಯಾಟ್ಸಮನ್ಗಳು ಒತ್ತಡ ಹೇರಿ ನಮ್ಮ ಬೌಲರ್ಗಳು ಸಾಕಷ್ಟು ಮಿಸ್ಟೇಕ್ ಮಾಡುವಂತೆ ಮಾಡಿದರು. ಬಂದ ಎಲ್ಲಾ ಆಟಗಾರರು ಹೊಡೆಯುತ್ತಿದ್ದರು’ ಎಂದಿದ್ದಾರೆ ಅವರು. ಬೌಲಿಂಗ್ ವಿಚಾರದಲ್ಲಿ ನಾವು ವೀಕ್ ಆಗಿದ್ದೇವೆ. ಪವರ್ಪ್ಲೇನಲ್ಲಿ ಎರಡು ಅಥವಾ ಮೂರು ವಿಕೆಟ್ ತೆಗೆಯಬೇಕು. ಆದರೆ, ಹಾಗಾಗಿಲ್ಲ’ ಎಂದಿದ್ದಾರೆ ಫಾಪ್!