ಐಪಿಎಲ್ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್ಆರ್ಹೆಚ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಮುಗ್ಗರಿಸಿದೆ. ಫೈನಲ್ಗೇರಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 36 ರನ್ಗಳಿಂದ ಸೋಲನುಭವಿಸಿದೆ.
ಬೆಂಗಳೂರಿನಲ್ಲಿ ರೇವ್ ಪಾರ್ಟಿ ಕೇಸ್.. ಆಂಧ್ರ ಸಚಿವ ಹಾಗೂ MLA ಆಪ್ತ ಸಿಸಿಬಿ ವಶಕ್ಕೆ!
ಸೋಲಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್, ಇದೊಂದು ಮಹತ್ವದ ಪಂದ್ಯವಾಗಿತ್ತು. ಮೊದಲ ಇನ್ನಿಂಗ್ಸ್ನಲ್ಲಿ ನಾವು ಬೌಲಿಂಗ್ ಮಾಡಿದ ರೀತಿ ನನಗೆ ನಿಜಕ್ಕೂ ಹೆಮ್ಮೆ ತಂದಿದೆ. ಆದರೆ ಬ್ಯಾಟಿಂಗ್ನಲ್ಲಿ ನಾವು ಎಡವಿದೆವು. ಅದರಲ್ಲೂ ಸ್ಪಿನ್ ದಾಳಿ ವಿರುದ್ಧ ಮಧ್ಯಮ ಓವರ್ಗಳಲ್ಲಿ ನಮ್ಮಲ್ಲಿ ಉತ್ತಮ ಆಯ್ಕೆಗಳ ಕೊರತೆ ಕಂಡುಬಂದಿತು. ಅಲ್ಲಿಯೇ ನಾವು ಪಂದ್ಯ ಕಳೆದುಕೊಂಡೆವು ಎಂದು ಹೇಳಿದ್ದಾರೆ.
ದ್ವಿತೀಯ ಇನಿಂಗ್ಸ್ ವೇಳೆ ಪಿಚ್ ಸ್ಪಿನ್ನರ್ಗಳಿಗೆ ಸಹಕಾರಿಯಾಗಿತ್ತು. ಅದರಲ್ಲೂ ಸನ್ರೈಸರ್ಸ್ ಹೈದರಾಬಾದ್ ಸ್ಪಿನ್ನರ್ಗಳು ಈ ಟರ್ನಿಂಗ್ಗಳನ್ನು ಪರಿಣಾಮಕಾರಿಯಾಗಿ ಬಳಸಲು ಪ್ರಾರಂಭಿಸಿದರು. ನಮ್ಮ ಬಲಗೈ ಬ್ಯಾಟ್ಸ್ಮನ್ಗಳ ವಿರುದ್ಧ ಮಧ್ಯಮ ಓವರ್ಗಳಲ್ಲಿ ಎಡಗೈ ಸ್ಪಿನ್ನರ್ಗಳು ಉತ್ತಮ ದಾಳಿ ಸಂಘಟಿಸಿದರು.
ನಮ್ಮ ಬ್ಯಾಟಿಂಗ್ ಲೈನಪ್ನಲ್ಲಿ ಎಡಗೈ ಬ್ಯಾಟರ್ಗಳು ಇಲ್ಲದಿರುವುದು ಕೂಡ ನಮ್ಮ ಸೋಲಿಗೆ ಕಾರಣವಾಯಿತು. ಶಿಮ್ರಾನ್ ಹೆಟ್ಮೆಯರ್ ಅವರನ್ನು ಹೊರತುಪಡಿಸಿ ಮಧ್ಯಮ ಕ್ರಮಾಂಕದಲ್ಲಿ ಯಾವುದೇ ಎಡಗೈ ಬ್ಯಾಟರ್ಗಳಿರಲಿಲ್ಲ. ಹೀಗಾಗಿ ನಾವು ಎಡಗೈ ಸ್ಪಿನ್ನರ್ಗಳ ವಿರುದ್ಧ ರಿವರ್ಸ್ ಸ್ವೀಪ್ ಮಾಡುವುದು ಅನಿವಾರ್ಯವಾಗಿತ್ತು. ಇಲ್ಲ ಕ್ರೀಸ್ ಕಚ್ಚಿ ನಿಲ್ಲಬೇಕಿತ್ತು. ಇದೇ ವೇಳೆ ಎಸ್ಆರ್ಹೆಚ್ ತಂಡದ ಎಡಗೈ ಸ್ಪಿನ್ನರ್ಗಳು ಮಧ್ಯಮ ಓವರ್ಗಳಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿ ಇಡೀ ಪಂದ್ಯದ ಗತಿಯನ್ನೇ ಬದಲಿಸಿ ಬಿಟ್ಟರು. ಇದುವೇ ನಮ್ಮ ಸೋಲಿಗೆ ಪ್ರಮುಖ ಕಾರಣ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)