ಕೋಲಾರ:- ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕ ಎಂದು ಬೈರತಿ ಸುರೇಶ್ ಹೇಳಿದ್ದಾರೆ.
ಇರಾನ್ ಸೀಜ್ ಮಾಡಿದ ಹಡಗಿನಲ್ಲಿದ್ದ ಭಾರತದ ಮಹಿಳಾ ಸಿಬ್ಬಂದಿ ತವರಿಗೆ!
ಈ ಸಂಬಂಧ ಮಾತನಾಡಿದ ಅವರು,ಕುರುಬ ಸಮುದಾಯ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಬೇಕು. ಸಿದ್ದರಾಮಯ್ಯ ಹಾಗೂ ಅಭ್ಯರ್ಥಿ ಗೌತಮ್ ಅವರಿಗೂ ನಿಮ್ಮ ಬೆಂಬಲ ಬೇಕು. ಒಂದು ವೇಳೆ ನೀವು ಮನಸ್ಸು ಬದಲಾಯಿಸಿ ಬೇರೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಸಿದ್ದರಾಮಯ್ಯನವರ ಸಿಎಂ ಸ್ಥಾನಕ್ಕೆ ಕುತ್ತು ಬರುತ್ತದೆ. ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಬೇಕಾದರೆ ಹೆಚ್ಚಿನ ಲೀಡ್ ಕೊಡಬೇಕೆಂದು ಆಗ್ರಹಿಸಿದರು.
ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಿನ್ನೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಎಂದು ಹೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಸುರೇಶ್, ಅದು ಬಾಯಿ ತಪ್ಪಿ ಹೇಳಿದ್ದಾರೆ ಅಷ್ಟೇ. ಬಹಳಷ್ಟು ನಾಯಕರು ಬಾಯ್ತಪ್ಪಿ ಮಾತಾಡಿದ್ದಾರೆ. ದೇವೇಗೌಡರು – ಯಡಿಯೂರಪ್ಪ ಮಾತನಾಡಿರುವುದನ್ನು ಕೇಳಿಸಿಕೊಳ್ಳಲಾಗದೆ ಕಿವಿ ಮುಚ್ಚಿಕೊಳ್ಳಬೇಕಾಗುತ್ತದೆ ಎಂದರು
ಮುಖ್ಯಮಂತ್ರಿ ಸಿದ್ದರಾಮಯ್ಯ ನಿತ್ಯ ಬಿಜೆಪಿ, ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅವರು ಆಸ್ತಿ ಮಾಡಿದ್ದರೆ, ಹಣ ಹೊಡೆದ್ದಿದ್ದರೆ ಮೋದಿ, ಬಿಜೆಪಿಯರು, ಇ.ಡಿ, ಐ.ಟಿ, ಸಿಬಿಐನವರು ಬಿಡುತ್ತಿರಲಿಲ್ಲ. ಪ್ರಾಮಾಣಿಕ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನೇ ಬಿಟ್ಟಿಲ್ಲ’ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.
ಸಿದ್ದರಾಮಯ್ಯ ಬಳಿ 200ರಿಂದ 300 ಶರ್ಟ್, ಪಂಚೆಗಳಿವೆ ಅಷ್ಟೇ. ಒಂದೂ ಕಪ್ಪು ಚುಕ್ಕೆ ಇಲ್ಲದೆ ರಾಜಕಾರಣ ಮಾಡಿರುವ ಏಕೈಕ ವ್ಯಕ್ತಿ. ಅವರಂಥ ನಾಯಕತ್ವ ಉಳಿಸುವುದು ಎಲ್ಲರ ಕರ್ತವ್ಯ. ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕೆಂದು ವಿರೋಧ ಪಕ್ಷದವರು ಏನೇನೋ ಮಾಡುತ್ತಿದ್ದಾರೆ’ ಎಂದರು.
ಎರಡನೇ ಬಾರಿ ಹಣ, ಆಮಿಷ ನೀಡಿ ಮುಖ್ಯಮಂತ್ರಿ ಆದವರು ಬೇರೆ ಪಕ್ಷಗಳಲ್ಲಿ ಇದ್ದಾರೆ. ಧೈರ್ಯ, ನಾಯಕತ್ವ, ಸ್ವಂತ ಶ್ರಮದಿಂದ ಮುಖ್ಯಮಂತ್ರಿ ಆಗುವುದು ಬೇರೆ. ಸಿದ್ದರಾಮಯ್ಯ ನಿಷ್ಠಾವಂತ, ಧೈರ್ಯವಂತ ರಾಜಕಾರಣಿ. ಜಿಲ್ಲಾ ಪಂಚಾಯಿತಿ ಸದಸ್ಯರೋ, ಕಾರ್ಪೊರೇಟ್ ಆದವರು ಸಿದ್ದರಾಮಯ್ಯ ಅವರಿಗಿಂತ ಹೆಚ್ಚು ಹಣ ಮಾಡಿಕೊಂಡಿದ್ದಾರೆ’ ಎಂದರು.