ಮಂಡ್ಯ: ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ. ಕಳೆದ 5 ವರ್ಷಗಳ ದಿಶಾ ಸಭೆಗಳಲ್ಲಿ ಹಲವು ವಿಷಯ ಚರ್ಚೆಯಾಗಿದೆ ಎಂದು ಮಂಡ್ಯದಲ್ಲಿ ಸಂಸದೆ ಸುಮಲತಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚರ್ಚೆಯಾದ ವಿಷಯ ಎಷ್ಟರ ಮಟ್ಟಿಗೆ ಜಾರಿಯಾಗಿದೆ ಎನ್ನುವುದರ ಬಗ್ಗೆ ವಿವರ ಕೇಳಬೇಕು. ಭ್ರೂಣ ಹತ್ಯೆ ಬಗ್ಗೆ ನಾನು 4 ವರ್ಷಗಳ ಹಿಂದೆಯೆ ಪ್ರಸ್ತಾಪ ಮಾಡಿದ್ದೆ. ಆದರೆ ಅದರ ವಿರುದ್ಧ ಸರಿಯಾದ ಕ್ರಮ ಆಗಲಿಲ್ಲ. ಭ್ರೂಣ ಹತ್ಯೆ ತಡೆಯಲು ಜಿಲ್ಲಾಡಳಿತ ವಿಫಲವಾಗಿದೆ ಬೇಸರ ವ್ಯಕ್ತಪಡಿಸಿದ್ದಾರೆ. ಇಂದಿನ ಸಭೆಯಲ್ಲಿ ಕೇಂದ್ರದ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗಿದೆ.
ಬೇಬಿಬೆಟ್ಟ ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಮಾತನಾಡಿದ ಅವರು, ಟ್ರಯಲ್ ಬ್ಲಾಸ್ಟ್ಗೆ ಕೋರ್ಟ್ ಆದೇಶ ಇದೆ. ಆದರೆ ವಾಸ್ತವ ಮಾಹಿತಿಯನ್ನು ಅಧಿಕಾರಗಳಿಗೆ ತಿಳಿಸಿದ್ದೇನೆ. ಟ್ರಯಲ್ ಬ್ಲಾಸ್ಟ್ಗೆ ರೈತರ ವಿರೋಧ ಇದೆ. ರೈತರ ಮನವಿಯಲ್ಲಿ ನ್ಯಾಯ ಇದೆ. ನಾನು ಅವರೊಂದಿಗಿದ್ದೇನೆ. ಟ್ರಯಲ್ ಬ್ಲಾಸ್ಟ್ ನಡೆಸಿದರೆ ಅನುಕೂಲಕ್ಕಿಂತ ಅನಾನುಕೂಲ ಜಾಸ್ತಿ. ಟ್ರಯಲ್ ಬ್ಲಾಸ್ಟ್ಗೆ ಸ್ಟೇ ಆರ್ಡರ್ ತರಲು ರೈತ ಸಂಘ ಮುಂದಾಗಿದೆ. ಜಿಲ್ಲಾಡಳಿತಕ್ಕೆ ಮೇಲ್ಮನವಿ ಸಲ್ಲಿಸುವ ಅವಕಾಶ ಇಲ್ಲ ಎಂದು ಹೇಳಿದ್ದಾರೆ.
Viral Video: ರಾಮಮಂದಿರ ಟೀಕಿಸುವ ಭರದಲ್ಲಿ ಐಶ್ವರ್ಯಾ ರೈಗೆ ರಾಹುಲ್ ಗಾಂಧಿ ಅವಮಾನ..! ಭುಗಿಲೆದ್ದ ಆಕ್ರೋಶ
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ದೆಹಲಿ ಪ್ರವಾಸದ ಬಗ್ಗೆ ಸುಮಲತಾ ಪ್ರತಿಕ್ರಿಯೆ ನೀಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಏನು ಬೇಕಾದರೂ ಹೇಳಿಕೊಳ್ಳಲಿ. ಅಂತೆ ಕಂತೆಗಳನ್ನ ನಾವು ಕೇಳಿಕೊಂಡೇ ಬರುತ್ತಿದ್ದೇವೆ. ಅಂತಿಮವಾಗುವವರೆಗೆ ಏನೂ ಹೇಳುವುದಕ್ಕೆ ಆಗಲ್ಲ. ನನ್ನ ಮುಂದೆ ಹಲವಾರು ಆಯ್ಕೆಗಳಿವೆ. ನನಗೆ ಬೇರೆಡೆ ಟಿಕೆಟ್ ಪಡೆಯುವುದು ಕಷ್ಟವಲ್ಲ. ನಾನು ಕ್ಷೇತ್ರ ಉಳಿಸಿಕೊಳ್ಳಬೇಕು ಅಂತಾ ಹೇಳಿದ್ದೇನೆ. ಅಂತಿಮ ನಿರ್ಧಾರ ಆಗುವವರೆಗೂ ಏನೂ ಹೇಳಲ್ಲ ಎಂದಿದ್ದಾರೆ.