ಕೆಆರ್ ಪುರ : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ರಾಜೀವ್ ಗೌಡ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿಕೆ ಮೋಹನ್ ಬಾಬು ಅವರು ವಾರ್ಡ್ ವಾರು ಭರ್ಜರಿ ಮತಯಾಚನೆ ನಡೆಸಿದರು.
ಕೆರೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು ಕೇಸ್: ಮೃತರ ಕುಟುಂಬಕ್ಕೆ ಹಣ ಸಹಾಯ ಮಾಡಿದ ಖಾಕಿ!
ಕ್ಷೇತ್ರದ ವಿಜಿನಾಪುರ ವಾರ್ಡ್ ನಲ್ಲಿ ಆಯೋಜಿಸಿದ್ದ ರ್ಯಾಲಿ ಭಾಗಿಯಾಗಿ ಅಭ್ಯರ್ಥಿ ರಾಜೀವ್ ಗೌಡ ಪರ ಮತಯಾಚನೆ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದದ್ದು ಕಾಂಗ್ರೆಸ್ ಸರ್ಕಾರ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ, ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಬಾರಿಯ ಚುನಾವಣೆಯಲ್ಲಿ ಮೋದಿ ಅಲೆ ಕಡಿಮೆಯಾಗಿದೆ. ಚುನಾವಣೆಯ ಸಮಯದಲ್ಲಿ ನೀಡಿದ ಭರವಸೆಗಳನ್ನು ಮೋದಿ ಸರ್ಕಾರವು 10 ವರ್ಷಗಳಿಂದ ಈಡೇರಿಸಿಲ್ಲ ಎಂವ ಭಾವನೆ ಜನರ ಮನಸ್ಸಿನಲ್ಲಿ ಬಂದಿದೆ. ದೇಶದಲ್ಲಿ ಬಡತನ ಕಡಿಮೆಯಾಗಿಲ್ಲ, ದಿನ ಬಳಕೆ ವಸ್ತು, ಗ್ಯಾಸ್, ಪೆಟ್ರೋಲ್ ದರ ಗಗನಕ್ಕೇರಿದೆ. ರೈತರ ಆದಾಯ ದುಪ್ಪಟ್ಟು ಭರವಸೆ ಸುಳ್ಳಾಗಿದೆ ಎಂದು ದೂರಿದರು.
ಕಳೆದ 20 ವರ್ಷಗಳಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನೆಲೆ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ ,ಆದರೆ ಈ ಬಾರಿ ಕಾಂಗ್ರೆಸ್ ಪರ ಜನರ ಒಲವಿದ್ದು .ಅತಿ ಹೆಚ್ಚು ಮತಗಳ ಅಂತರದಲ್ಲಿ ಅಭ್ಯರ್ಥಿ ಗೆದ್ದು ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು .
2023ರ ವಿಧಾನಸಭಾ ಚುನಾವಣೆಯಲ್ಲಿ ಕೆಆರ್ ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಲಭಿಸಿದ ಮತಗಳಿಗಿಂತ ಹೆಚ್ಚು ಮತವನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ರಾಜೀವ್ ಗೌಡ ಅವರಿಗೆ ಒದಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಜೊತೆಗೂಡಿ ಅಗಲಿರುಳು ಶ್ರಮಿಸುತ್ತೇನೆ ಎಂದು ತಿಳಿಸಿದರು .
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಬಂಡೆ ರಾಜಣ್ಣ ,
ಮುಖಂಡರಾದ ಸೈಯದ್ ಸಮಿವುಲ್ಲಾ,ಅಮಾನುಲ್ಲಾ, ಎಸ್.ಟಿ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ ಇದ್ದರು.