ಹುಬ್ಬಳ್ಳಿ; ನೇಹಾ ಹತ್ಯೆಯಾಗಿರುವದನ್ನ ನಾನು ಖಂಡಿಸಿಸುತ್ತೇನೆ ಎಂದು ಸಚಿವ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮುರುಗೇಶ ನಿರಾಣಿ ಹೇಳಿದರು. ನೇಹಾ ನಿರಂಜನ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಅವರುಸುದ್ದಿಗಾರರ ಜೊತೆಗೆ ಮಾತನಾಡಿದರು. ನೇಹಾ ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಾಯಿ ಮುಂದೆನೆ ಈ ರೀತಿ ಹತ್ಯೆ ಆಗುತ್ತೆ ಅಂದರೆ ಆ ಕುಟುಂಬಕ್ಕೆ ಎಷ್ಟು ನೋವು ಆಗಿರಬೇಕು ನೇಹಾ ಹತ್ಯೆ ಮಾಡಿರುವ ಯುವಕ ಬಗ್ಗೆ ತನಿಖೆ ಮಾಡುತ್ತಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕಬೇಕುಆತನ ಹಿಂದೆ ಯಾರು ಇದ್ದಾರೆ ಯಾರ ಕೈವಾಡವಿದೆ ಅನ್ನೋದನ್ನ ತನಿಖೆ ನಡೆಸಬೇಕು,
ಹತ್ಯೆಗೆ ಯಾರು ಪ್ರೇರಣೆ ಕೊಟ್ಟಿದ್ದಾರೆ ಅವರಿಗೂ ಶಿಕ್ಷೆಯಾಗಬೇಕು ನಮ್ಮ ಪಕ್ಷದ ಮುಖಂಡರರು, ಸ್ವಾಮೀಜಿಗಳು ಅನೇಕ ರಾಜಕೀಯ ಮುಖಂಡರು ಟ್ರೇಡ್ ಯುನಿಯನ್ ದವರು ಕೂಡ ಬಂದು ಸಾಂತ್ವನ ಹೇಳಿದ್ದಾರೆ ಒಂದನೇ ತಾರೀಖಿನಂದು ನಮ್ಮ ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು ನಿರಂಜನ ಮನೆಗೆ ಭೇಟಿ ನೀಡಲಿದ್ದಾರೆ. ನಿರಂಜನ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳುವ ಕೆಲಸ ಅಮಿತ್ ಶಾ ಅವರು ಮಾಡಲಿದ್ದಾರೆಕಾಲೇಜ್ ಕ್ಯಾಂಪಸ್ ಒಳಗೆ ಇಂತಹ ಘಟನೆಗಳು ಮುಂದೆ ಆಗಬಾರದು.
Small Saving: ಈ ಯೋಜನೆಯಲ್ಲಿ 417ರೂ. ಹೂಡಿಕೆ ಮಾಡಿದ್ರೆ ಮಿಲೇನಿಯರ್ ಆಗಬಹುದು..! ಹೇಗೆ ಗೊತ್ತಾ..?
ಅದಕ್ಕೆ ಸ್ಪೆಷಲ್ ಆ್ಯಕ್ಟ್ ತರಬೇಕು ಆವಾಗ ಇಂತಹ ಘಟನೆಗಳಿಗೆ ಕಡಿವಾಣ ಹಾಕಬಹುದು. ಕಾಂಗ್ರೆಸ್ ಕಾರ್ಪೊರೇಟರ ಇದ್ದಾರೆ ನಿರಂಜನ ಇವರ ಮನೆಗೆ ನಾವು ಸಾಂತ್ವನ ಹೇಳೋದು ಹೇಗೆ ರಾಜಕಾರಣ ಆಗುತ್ತೆ, ಇಂತಹ ಘಟನೆಗಳು ನಡೆದಾಗ ಎಲ್ಲರೂ ಬಂದು ಸಾಂತ್ವನ ಹೇಳುತ್ತಾರೆ ಆದ್ರೆ ಇದನ್ನ ಕಾಂಗ್ರೆಸ್ ರಾಜಕಾರಣ ಅಂತ ಶಬ್ದ ಬಳಸಬಾರದು. ಇನ್ನೂ ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆಘಟನೆ ಆದ ನಂತರ ಹತ್ಯೆಯ ಸಾಧಕ ಬಾದಕಗಳ ಬಗ್ಗೆ ವಿಚಾರ ಮಾಡಿ ಸ್ಟೇಟಮೆಂಟ್ ಕೊಡಬೇಕಿತ್ತು ಆದ್ರೆ ಸಿದ್ದರಾಮಯ್ಯನವರು ಗೃಹಸಚಿವರು ಈ ರೀತಿ ಹೇಳಿಕೆ ಕೊಡಬಾರದಿತ್ತು
ನಂತರ ಅವರ ಮನೆಗೆ ಬಂದು ಸಾಂತ್ವನ ಹೇಳಿ ಕ್ಷಮೆಯಾಚಿಸಿದ್ದಾರೆ ಎಂದರು.
ಸಿಐಡಿ ಅಧಿಕಾರಿಗಳು ಪಕ್ಷಾತೀತವಾಗಿರುತ್ತಾರೆ. ನೇಹಾ ಕೊಲೆ ಪ್ರಕರಣ ನ್ಯಾಯ ಕೊಡಿಸುವ ದೃಷ್ಟಿಯಿಂದಲೇ ಸಿಎಂ ಅವರು ಸಿಐಡಿಗೆ ವಹಿಸಿದ್ದಾರೆ. ಹಾಗಾಗಿ ಯಾರಿಗೂ ಇದರಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವಿರೋದಿಲ್ಲ ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಇನ್ನೂ ಚರ್ಚೆ ಮಾಡಿ ಮುಂದಿನ ತನಿಖೆ ಬಗ್ಗೆ ಹೇಗೆ ಅನ್ನೋದನ್ನ ತಿಳಿಸ್ತೇವಿ ಸದ್ಯ ತನಿಖೆ ನಡೆಯುತ್ತಿದೆ ನಡೆಯಿಲಿತನಿಖೆ ನಮಗೆ ಸಮರ್ಪಕವಾಗಿಲ್ಲ ಅನಿಸಿದ್ರೆ ನಾವು ಮುಂದೆ ಹೋರಾಟ ಮಾಡುತ್ತೇವೆಒಂದು ವೇಳೆ ತನಿಖೆಯ ದಾರಿ ಯಾರಾದ್ರೂ ತಪ್ಪಿಸುವ ಕೆಲಸ ಮಾಡಿದ್ದಾರೆ ಉಗ್ರವಾದ ಹೋರಾಟ ಮಾಡಲು ಸಿದ್ದರಿದ್ದೇವೆ ಎಂದರು.