ತಮಿಳುನಾಡು:- ಬೊಜ್ಜು ಕರಗಿಸಲು ಶಸ್ತ್ರಚಿಕಿತ್ಸೆ ಮೊರೆ ಹೋಗುವವರು ಈ ಸುದ್ದಿ ನೋಡಲೇಬೇಕಾಗಿದೆ. ಬೊಜ್ಜು ಕರಗಿಸೋ ಶಸ್ತ್ರಚಿಕಿತ್ಸೆಯಲ್ಲಿ 26 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ರಾಜಧಾನಿ ಚೆನ್ನೈನಲ್ಲಿ ಜರುಗಿದೆ.
ಶಸ್ತ್ರಚಿಕಿತ್ಸೆಗೆ ಒಳಗಾದ 15 ನಿಮಿಷದಲ್ಲಿ ಯುವಕ ಮೃತಪಟ್ಟಿದ್ದಾನೆ. ಪುದುಚೇರಿ ಮೂಲದ 26 ವರ್ಷದ ಹೇಮಚಂದ್ರನ್ ಅವರು ಚೆನ್ನೈನ ಪಮ್ಮಲ್ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ತೂಕ ಇಳಿಸುವ ಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಆರಂಭಿಸಿದ 15 ನಿಮಿಷದಲ್ಲಿ ಅವರಿಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.
ಈ ವೇಳೆ ಯುವಕನ ಸಾವಿನ ತನಿಖೆಗೆ ಇಬ್ಬರು ಜಂಟಿ ನಿರ್ದೇಶಕರನ್ನೊಳಗೊಂಡ ಸಮಿತಿ ರಚಿಸುವಂತೆ ವೈದ್ಯಕೀಯ ಇಲಾಖೆ ಆದೇಶ ನೀಡಿದೆ. ಯುವಕನ ಸಾವಿನ ಕುರಿತು 2 ದಿನಗಳಲ್ಲಿ ತನಿಖಾ ವರದಿ ಸಲ್ಲಿಸುವಂತೆ ಆದೇಶಿಸಿದೆ. ಸೂಕ್ತ ಚಿಕಿತ್ಸೆ ದೊರೆಯದೇ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಚೆನ್ನೈ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಂಗಳವಾರ ಬೆಳಿಗ್ಗೆ 9:30 ಕ್ಕೆ ಆಪರೇಷನ್ ಥಿಯೇಟರ್ನಲ್ಲಿ ಹೇಮಚಂದ್ರನಿಗೆ ಮೆಟಾಬಾಲಿಕ್ ಮತ್ತು ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ಕಾರ್ಯಾಚರಣೆಯ ಮಧ್ಯದಲ್ಲಿ ಹೇಮಚಂದ್ರನ್ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದು, ತಕ್ಷಣ ವೈದ್ಯರು ಆತನನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ