ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕಿದ ಮತ್ತು ಆಮಿಷವೊಡ್ಡಿದ ಆರೋಪದ ಮೇಲೆ ತಮ್ಮ ವಿರುದ್ಧ ನಗರದ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲು ಏ.19 ರಂದು ಮ್ಯಾಜಿಸ್ಪ್ರೇಟ್ ಕೋರ್ಟ್ ಹೊರಡಿಸಿದ ಆದೇಶ ಮತ್ತು ಅದನ್ನು ಆಧರಿಸಿ ಆರ್ಎಂಸಿ ಯಾರ್ಡ್ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕೆಂದು ಅವರು ಅರ್ಜಿಯಲ್ಲಿಕೋರಿದ್ದು, ಆ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.
ಮತಗಟ್ಟೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುತ್ತಿದ್ದೀರಾ!?.. ಹಾಗಿದ್ರೆ ಈ ಸುದ್ದಿ ಓದಿ!
ಅರ್ಜಿಯಲ್ಲಿಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಪ್ರಕರಣ ಸಂಬಂಧ ಮ್ಯಾಜಿಸ್ಪ್ರೇಟ್ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸಂಚಾರಿ ವಿಚಕ್ಷಣಾ ತಂಡದ ಮುಖ್ಯಸ್ಥ ಬಿಕೆ ದಿನೇಶ್ ಕುಮಾರ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.