ಬೆಂಗಳೂರು:- ಸಂಜಯ್ ನಗರ ಪೊಲೀಸರು ಕಾರ್ಯಚರಣೆ ನಡೆಸಿ ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ: ಇತರೆ ಖೈದಿಗಳಿಗೆ ಶುರುವಾಯ್ತು ಸಂಕಷ್ಟ!
38 ವರ್ಷದ ಅಕ್ಬರ್, 32 ವರ್ಷದ ಮುಬೀನಾ, 39 ವರ್ಷದ ಸೋನು ಯಾದವ್ ಬಂಧಿತರು. ಮೂವರು ವಿಮಾನದಲ್ಲಿ ಬೆಂಗಳೂರಿಗೆ ಬಂದು ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ಬಳಿಕ ಮನೆಗಳ್ಳತನ ಮಾಡುತ್ತಿದ್ದರು. ಕೊನೆಗೂ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 30.50 ಲಕ್ಷ ರೂಪಾಯಿ ಮೌಲ್ಯದ 405 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ಮೇ 10ರಂದು ಎಇಸಿಎಸ್ ಲೇಔಟ್ ನಿವಾಸಿಯೊಬ್ಬರ ಮನೆಯಲ್ಲಿ ಕಳ್ಳತನ ನಡೆದಿತ್ತು. ಹಾಡು ಹಗಲೇ ಮನೆಯಲ್ಲಿದ್ದ ಆಭರಣಗಳನ್ನು ಕಳ್ಳರು ದೋಚಿದ್ದರು. ಬೀಗ ಮುರಿದು ಎಲ್ಲವನ್ನು ಕಳವು ಮಾಡಿದ್ದರು. ಈ ಪ್ರಕರಣ ಸಂಬಂಧ ದೂರು ದಾಖಲಾಗಿತ್ತು. ದಾಖಲಾದ ದೂರಿನ ಮೇರೆಗೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟ ನೇತೃತ್ವದಲ್ಲಿ ಕಳ್ಳರನ್ನು ಹುಡುಕಲಾಗಿದೆ. ಈ ವೇಳೆ ಅಲ್ಲಿನ ಕಟ್ಟಡಗಳ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲಿಸಲಾಗಿದೆ.
ಸಿಸಿಟಿವಿ ದೃಶ್ಯದಲ್ಲಿ ಸುಳಿವೊಂದು ಸಿಕ್ಕಿದ್ದು, ಅದರ ಬೆನ್ನಟ್ಟಿದ ಪೊಲೀಸರಿಗೆ ಆರೋಪಿ ಸೋನು ಯಾದವ್ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಇರೋದು ಪತ್ತೆಹಚ್ಚಿ ಅರೆಸ್ಟ್ ಮಾಡಿದ್ದಾರೆ.
ಇನ್ನು ಬಂಧಿತ ಮೂವರು ಕರ್ನಾಟಕ ಮಾತ್ರವಲ್ಲದೆ, ಮಹಾರಾಷ್ಟ್ರ, ಗುಜರಾತ್ ಸೇರಿ ವಿವಿಧ ರಾಜ್ಯಗಳಲ್ಲಿ ಕಳ್ಳತನ ಮಾಡಿದ್ದಾರೆ.