ಶಿವಮೊಗ್ಗ:- ಪೊಲೀಸರ ಸಮಯ ಪ್ರಜ್ಞೆಯಿಂದ 3 ಜೀವಗಳ ರಕ್ಷಣೆ ಮಾಡಲಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ವಾಹನ ಸವಾರರ ಗಮನಕ್ಕೆ: ಇನ್ಮುಂದೆ ಬೇಕಾಬಿಟ್ಟಿ ಸಂಚಾರಿ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!
ಪ್ರೀತಿ(13), ಪ್ರಜ್ವಲ್(9) ಹಾಗೂ ಸಂಗೀತಾ(33) ಆತ್ಮಹತ್ಯೆಗೆ ಯತ್ನಿಸಿದ್ದವರು. ಜಿಲ್ಲೆಯ ಸಾಗರ ತಾಲೂಕಿನ ಅಣಲೇಕೊಪ್ಪ ನಿವಾಸಿಗಳು.
ಮಹಿಳೆ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆ ಮತ್ತು ಮಕ್ಕಳನ್ನ ರಕ್ಷಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.