ಕಾರವಾರ:- ಚುನಾವಣಾ ಕರ್ತವ್ಯ ಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಅವರು ಆದೇಶ ಹೊರಡಿಸಿದ್ದಾರೆ.
ನಿಮ್ಮ ಕುತ್ತಿಗೆ ಸುತ್ತಾ ಕಪ್ಪಾಗಿದ್ಯಾ?.. ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ..!
ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್ ನಾಯ್ಕ, ಲಕ್ಷ್ಮಣ್ ಮೊಗೇರ, ಶ್ರೀಧರ ನಾಯ್ಕ್ ಎಂಬವರು ಚುನಾವಣಾ ಸಂಬಂಧ ಎಲ್ಲಾ ಕರ್ತವ್ಯದಲ್ಲೂ ನಿರ್ಲಕ್ಷತನ ತೋರಿಸುತ್ತಿದ್ದರು. ಈ ಹಿನ್ನಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ