ಮೈಸೂರು: ಮೈಸೂರು ತಾಲೂಕಿನ ಚಿಕ್ಕಕಾನ್ಯ, ದೊಡ್ಡಕಾನ್ಯ ಬ್ಯಾತಹಳ್ಳಿ, ಸಿಂದುವಳ್ಳಿ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹುಲಿ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ಸರಗೂರು ಟ್ರಾಕ್ ಟೀಮ್, ಅಗ್ನಿಶಾಮಕ ದಳ, ಅರವಳಿಕೆ ವೈದ್ಯರ ತಂಡ, ವಿಶೇಷ ಹುಲಿ ರಕ್ಷಣಾ ದಳ, ಚಿರತೆ ಕಾರ್ಯಪಡೆ ತಂಡ, ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಕ್ಯಾಮೆರಾಗಳ ಮೂಲಕ ಹುಲಿ ಚಲನವಲನ ಪತ್ತೆ ಹಚ್ಚಲು ಅರಣ್ಯ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.ಹುಲಿ ಕಾಣಿಸಿಕೊಂಡಿರುವ ಗ್ರಾಮದ ಜನರು ಅನಾವಶ್ಯಕವಾಗಿ ಓಡಾಡಬಾರದು. ಹುಲಿ ಸೆರೆ ಕಾರ್ಯಾಚರಣೆ ಮುಗಿಯುವವರೆಗೂ ಅರಣ್ಯ ಇಲಾಖೆಗೆ ಸಹಕಾರ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.