ಆನೇಕಲ್:- ಹೊಸೂರು ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರ್ಯಾಪಿಡೋ ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಕೆಳಗೆ ಬಿದ್ದಿದ್ದಾರೆ.
IND Vs NZ: ಭಾನುವಾರ ಚಾಂಪಿಯನ್ಸ್ ಟ್ರೋಫಿ ಫೈನಲ್ ಫೈಟ್: ಪಂದ್ಯ ರದ್ದಾದ್ರೆ ಗೆಲುವು ಯಾರದ್ದು?
ಘಟನೆಯಲ್ಲಿ ಹಿಂಬದಿ ಬೈಕ್ ಸವಾರಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರ್ಯಾಪಿಡೋ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕಮ್ಮಸಂದ್ರ ನಿವಾಸಿ ಮಂಜುಳಾ(35) ಸ್ಥಳದಲ್ಲಿಯೇ ಸಾವನ್ನಪ್ಪಿದೆ. ರ್ಯಾಪಿಡೋ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಮೃತಳು ಹೆಬ್ಬಗೋಡಿ ಠಾಣೆ ವ್ಯಾಪ್ತಿಯ ಕಮ್ಮಸಂದ್ರ ನಿವಾಸಿ. ಡಿಕ್ಕಿ ಹೊಡೆದ ಟಿಪ್ಪರ್ ಲಾರಿ ನಿಲ್ಲಿಸದೇ ಪರಾರಿ ಆಗಿದ್ದಾರೆ.
ಸಿನಿಮಾ ಶೈಲಿಯಲ್ಲಿ ವಾಹನ ಸವಾರರು ಟಿಪ್ಪರ್ ಅಡ್ಡಗಟ್ಟಿದ್ದಾರೆ. ಎಲೆಕ್ಟ್ರಾನಿಕ್ಸ್ ಸಿಟಿ ವೀರಸಂದ್ರ ಸಿಗ್ನಲ್ ಬಳಿ ವಾಹನ ಸವಾರರು, ಲಾರಿ ತಡೆದಿದ್ದಾರೆ.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.