ಬಳ್ಳಾರಿ: ಬೈಕ್ ಸವಾರನ ಮೇಲೆ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ಪಟ್ಟಣದ ಹೊಸಪೇಟೆ ಬೈಪಾಸ್ ಬಳಿ ನಡೆದಿದೆ. ಡೋಣಿಮಲೈ ಗ್ರಾಮದ ನಾಗರಾಜ್( 25) ಲಾರಿ ಚಕ್ರದಡಿ ಸಿಲುಕಿ ಸಾವನ್ನಪ್ಪಿದ ದುರ್ಧೈವಿಯಾಗಿದ್ದು,
BMTC Recruitment: ದ್ವಿತೀಯ PUC ಪಾಸಾದವರಿಗೆ BMTCಯಲ್ಲಿ ಬಂಪರ್ ಉದ್ಯೋಗ..! ಈಗಲೇ ಅರ್ಜಿ ಸಲ್ಲಿಸಿ
ಚಾಲಕನ ನಿಯಂತ್ರಣ ತಪ್ಪಿ ಹಿಂಬಂದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್ ಮೇಲೆ ಹರಿದಿದೆ. ಬೈಕ್ ಸಮೇತ ಲಾರಿ ಚಕ್ರಕ್ಕೆ ಸಿಲುಕಿದ ನಾಗರಾಜ್ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಲಾರಿ ಚಾಲಕನನ್ನ ವಶಕ್ಕೆ ಪಡೆದಿದ್ದು, ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)