ಬೆಂಗಳೂರು: ಹಿಜಾಬ್ ನಿಷೇಧ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕಿಡಿ ಹೊತ್ತಿಸಿದೆ.ಹಿಜಾಬ್ ಬಗ್ಗೆ ಸಿಎಂ ಹೇಳಿಕೆ ನೀಡುತ್ತಿದ್ದಂತೆ,ಬಿಜೆಪಿ ನಾಯಕರು ಕೊತ ಕೊತ ಕುದಿಯಲು ಪ್ರಾರಂಭಮಾಡಿದ್ದಾರೆ.ಸಿದ್ದರಾಮಯ್ಯ 2ನೇ ಟಿಪ್ಪುಸುಲ್ತಾನ್,ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲು ಹೊರಟ್ಟಿದ್ದಾರೆ ಎಂದು ಕೇಸರಿ ಕಲಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಹಿಜಾಬ್ ನಿಷೇಧವನ್ನ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಅವರ ಈ ಹೇಳಿಕೆಯೀಗ ರಾಜಕೀಯ ವಲಯದೊಳಗೆ ಸಂಚಲನ ಮೂಡಿಸಿದೆ. ರಾಜ್ಯ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ದ ಅಕ್ರೋಶ ಹೊರ ಹಾಕುವ ಮೂಲಕ ಎಚ್ಚರಿಕೆ ಕೊಟ್ಟಿದೆ.