ಬೆಂಗಳೂರು: ಕನ್ನಡ ಚಿತ್ರರಂಗದ ಕಲಾಸರಸ್ವತಿ ಲೀಲಮ್ಮ ಇನ್ನು ನೆನಪಷ್ಟೇ ಅಮ್ಮನ ಕಳೆದುಕೊಂಡ ಆಘಾತದಿಂದ ಪುತ್ರ ವಿನೋದ್ ರಾಜ್ ಇನ್ನೂ ಹೊರಬಂದಿಲ್ಲಇವತ್ತು ಲೀಲಾವತಿ (Leelavathi) ಅವರ ಹಾಲು ತುಪ್ಪದ (Haalu-Tuppa) ಕಾರ್ಯ ನೆರವೇರಿಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಹಾಲುತುಪ್ಪದ ಕಾರ್ಯ ನಡೆಯಲಿದೆ. ಬಳಿಕ 11 ದಿನದ ಕಾರ್ಯ ಮಾಡಲು ನಿರ್ಧಾರ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಕುಟುಂಬದ ಸದಸ್ಯರಷ್ಟೇ ಭಾಗಿಯಾಗುತ್ತಾರೆ. ಮಧ್ಯಾಹ್ನ 12 ಗಂಟೆಯ ನಂತರ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಬೆಂಗಳೂರು: ಡೆಂಗ್ಯೂ ಆರ್ಭಟ, ಕಳೆದ 1 ತಿಂಗಳಲ್ಲಿ ದಾಖಲೆ ಮಟ್ಟದ ಕೇಸ್ ಪತ್ತೆ
ಶನಿವಾರ ಸಂಜೆ ನೆಲಮಂಗಲದ ಸೋಲದೇವನಹಳ್ಳಿ (Soladevanahalli) ಬಳಿ ಲೀಲಾವತಿ ಅವರ ಫಾರ್ಮ್ ಹೌಸ್ನಲ್ಲಿರುವ ತೋಟದಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತಿಮ ವಿಧಿ ವಿಧಾನ ಕಾರ್ಯವನ್ನು ಪುತ್ರ ವಿನೋದ್ ರಾಜ್ (Vinod Raj) ಹಾಗೂ ಮೊಮ್ಮಗ ಯುವರಾಜ್ ನೆರವೇರಿಸಿದರು.