ಬೆಂಗಳೂರು ಗ್ರಾಮಾಂತರ: ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ, ಸರಕು ಸಾಗಣೆ ವಾಹನಗಳ ತಡೆರಹಿತ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಸ್ಯಾಟಲೈಟ್​ ಟೌನ್ ರಿಂಗ್​ ರೋಡ್​​ನ ಮೊದಲ ಹಂತದ ದೊಡ್ಡಬಳ್ಳಾಪುರ-ಹೊಸಕೋಟೆ ಮಾರ್ಗ ಸಂಚಾರಕ್ಕೆ ಮುಕ್ತವಾಗಿದೆ.

ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ

ದೊಡ್ಡಬಳ್ಳಾಪುರ ಬೈಪಾಸ್‌ನಿಂದ ಆರಂಭಗೊಂಡು ಹೊಸಕೋಟೆ ವರೆಗಿನ ನಾಲ್ಕು ಪಥ ರಸ್ತೆಯ 47 ಕಿ.ಮಿ.ನಿಂದ 76.150 ಕಿ.ಮಿ ವರೆಗೆ ಬಳಕೆದಾರರಿಗೆ ನಲ್ಲೂರು ದೇವನಹಳ್ಳಿ ಸುಂಕ ವಸೂಲಾತಿ ಕೇಂದ್ರದಲ್ಲಿ ಇಂದಿನಿಂದ ಶುಲ್ಕ ಸಂಗ್ರಹ ಮಾಡಲಾಗುತ್ತದೆ.

ಇದು 2024ರ ಮಾರ್ಚ್‌31 ರವರೆಗೆ ಜಾರಿಯಲ್ಲಿರಲಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯದ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.

Share.