ಬೆಂಗಳೂರು:- ಕರ್ನಾಟಕದಲ್ಲಿ ಉಚಿತ ಬಸ್ ಸೇವೆ ಆರಂಭವಾಗಿ ನಾಳೆಗೆ ಒಂದು ವರ್ಷ ಆಗಲಿದೆ. ರಾಜ್ಯ ಸರ್ಕಾರದ ಈ ಯೋಜನೆಯಿಂದ ನಾಲ್ಕು ನಿಗಮಕ್ಕೆ ಬರೋಬ್ಬರಿ 5481 ಕೋಟಿ ರೂಪಾಯಿ ಆದಾಯ ಬಂದಿದೆ. ಕೆಎಸ್ಆರ್ಟಿಸಿ ಒಂದರಲ್ಲೇ 68 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದರೆ, ಬಿಎಂಟಿಸಿಯಲ್ಲಿ 71 ಕೋಟಿ, ಕೆಕೆಆರ್ಟಿಸಿ- ಎನ್ಡಬ್ಲ್ಯುಕೆಆರ್ಟಿಸಿಯಲ್ಲಿ 85 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದರಿಂದ ನಾಲ್ಕು ನಿಗಮಗಳಿಗೆ ಕೋಟ್ಯಂತರ ರೂಪಾಯಿ ಆದಾಯ ಬಂದಿದೆ.
ತುಂಬಾ ದಪ್ಪ ಇದ್ದೀರಾ!?.. ಬೇಗ ಸ್ಲಿಮ್ ಆಗಲು ನಿತ್ಯ ಈ ಬಣ್ಣದ ಬಾಳೆಹಣ್ಣು ಸೇವಿಸಿ!
ಈ ಸಂಬಂಧ ಮಾತನಾಡಿದ ರಾಮಲಿಂಗಾರೆಡ್ಡಿ, ಕೆಎಸ್ಆರ್ಟಿಸಿಗೆ 2070 ಕೋಟಿ ರೂಪಾಯಿ ಆದಾಯ ಬಂದಿದ್ದರೆ, ಬಿಎಂಟಿಸಿಗೆ 937 ಕೋಟಿ ರೂಪಾಯಿ, ಕೆಕೆಆರ್ಟಿಸಿ- ಎನ್ಡಬ್ಲ್ಯುಕೆಆರ್ಟಿಸಿಗೆ ಸೇರಿ ಒಟ್ಟು 2472 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ ಎಂದರು.
ಶಕ್ತಿ ಯೋಜನೆ ಆರಂಭದಿಂದ ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕೆಲಸಕ್ಕೆ ಹೋಗುವ ಮಹಿಳೆಯರಿಗೆ ದೊಡ್ಡ ಮಟ್ಟದಲ್ಲಿ ಸಹಾಯ ಆಗಿದ್ದರೆ, ಇತ್ತ ರಾಜ್ಯದ ಧಾರ್ಮಿಕ ಕ್ಷೇತ್ರ, ಪ್ರವಾಸಿ ತಾಣಗಳಿಗೆ ಸೇರಿ ಇತರೆಡೆಗೆ ನಿತ್ಯವೂ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಶಕ್ತಿ ಯೋಜನೆಯಿಂದಾಗಿ ಸಾವಿರಾರು ರೂಪಾಯಿ ಉಳಿತಾಯ ಆಯ್ತು. ಇದೇ ರೀತಿ ಇನ್ನಷ್ಟು ವರ್ಷ ಮುಂದುವರೆಯಲಿ ಎಂದು ಮಹಿಳೆಯರು, ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.
ಈ ವಾರ ಅಥವಾ ಮುಂದಿನ ವಾರ ರಾಜ್ಯ ಸರ್ಕಾರ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಿ ಶಕ್ತಿ ಯೋಜನೆಯ ವರ್ಷಾಚರಣೆ ಸಂಭ್ರಮಿಸಲು ಚಿಂತನೆ ನಡೆಸಿದೆ. ಸದ್ಯದಲ್ಲೇ ದಿನಾಂಕ ಘೋಷಣೆ ಮಾಡಲಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)