ದಿನ ಕಳೆದಂತೆ ದಕ್ಷಿಣ ಭಾರತದಲ್ಲಿ ಅದರಲ್ಲೂ ಕೇರಳ ಮತ್ತು ಬೆಂಗಳೂರಲ್ಲಿ ಭಾರೀ ಮಳೆ ಮತ್ತು ಪ್ರವಾಹದ ಮನ್ಸೂಚನೆ ನೀಡಲಾಗಿದೆ. ದಕ್ಷಿಣ ಗುಜರಾತ್ ಮೂಲಕ ಮಧ್ಯ ಕೇರಳದ ಕರಾವಳಿವರೆಗೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವುದು, ಕರ್ನಾಟಕದ ಕರಾವಳಿ ಭಾಗ ಮತ್ತು ಪಶ್ಚಿಮಘಟ್ಟ ಭಾಗಗಳಲ್ಲಿ ಗಾಳಿ ಬೀಸುತ್ತಿರುವ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ ಎರಡು ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಆ.6 ರಿಂದ ಆ.7 ರವರೆಗೆ ಈ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಅಬ್ಬಬ್ಬಾ! ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಹಿಡಿದು 150 ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ ಈ ʼʼಕಾಡು ಬಸಳೆʼʼ
ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಆ .4 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮಳೆ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಷಿಯಸ್ ಇರಲಿದೆ.
ವ್ಯಾಪಕ ಮಳೆ, ಯೆಲ್ಲೋ ಅಲರ್ಟ್
ಮುಂದಿನ ದಿನಗಳಲ್ಲಿ ಕೇರಳದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾನಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೇರಳದ ಕಾಸರಗೋಡು, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯಾವುದೇ ತೀವ್ರ ಮತ್ತು ವಿಪರೀತ ಮಳೆಯ ಎಚ್ಚರಿಕೆಗಳಿಲ್ಲದಿದ್ದರೂ, ಈ ದಿನಗಳಲ್ಲಿಎಚ್ಚರಿಕೆಯನ್ನು ಕಳೆದುಕೊಳ್ಳಬೇಡಿ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇತ್ತೀಚಿನ ದಿನಗಳಲ್ಲಿಅತಿ ವೃಷ್ಟಿ ಅನುಭವಿಸಿರುವ ಪ್ರದೇಶಗಳಲ್ಲಿ ತೀವ್ರ ಎಚ್ಚರಿಕೆ ವಹಿಸಬೇಕು. ಭೂ ಕುಸಿತ, ಹಠಾತ್ ಪ್ರವಾಹಕ್ಕೊಳಗಾಗುವ ಪ್ರದೇಶಗಳಿಂದ ದೂರವಿರಲು ಜನರಿಗೆ ಎಚ್ಚರಿಕೆ ನೀಡಲಾಗಿದೆ ಮತ್ತು ಜನರು ನದಿ ದಡ ಮತ್ತು ಅಣೆಕಟ್ಟುಗಳ ಕೆಳಗಿನ ಪ್ರದೇಶಗಳಿಂದ ದೂರವಿರಬೇಕು.
ಕೇರಳದ ಕರಾವಳಿಯಲ್ಲಿಅಲೆಗಳು ಎತ್ತರಕ್ಕೆ ಬರುವ ಸಾಧ್ಯತೆ ಇದೆ ಮತ್ತು ಮಧ್ಯ ಕೇರಳದಿಂದ ದಕ್ಷಿಣ ಗುಜರಾತ್ ಕರಾವಳಿಯವರೆಗೆ ಸಮುದ್ರ ತೀರ ಅತಿ ಅಪಾಯಕಾರಿಯಾಗಿದೆ. ಮುಂಗಾರು ಕೂಡ ಸಕ್ರಿಯವಾಗಿದೆ. ಇದರ ಪರಿಣಾಮ ಕೇರಳದಲ್ಲಿ ಮಳೆ ಮುಂದುವರಿದಿದೆ ಎಂದು ತಿಳಿಸಿದೆ.