ಮೈಸೂರು:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್ ಮಾಡಲಾಗುತ್ತದೆ.
ಅಕ್ರಮ ಅನಕೊಂಡ ಸಾಗಾಟ: ಕಸ್ಟಮ್ಸ್ ಅಧಿಕಾರಿಗಳಿಂದ ವಿದೇಶಿ ಪ್ರಯಾಣಿಕ ಅರೆಸ್ಟ್!
ಮತದಾನದ ದಿನ ಶುಕ್ರವಾರವಾಗಿದ್ದರಿಂದ ಅಂದು ರಜೆ ಇದೆ. ಶನಿವಾರ, ಭಾನುವಾರ ಹೇಗೂ ರಜೆಯಾದ್ದರಿಂದ ಮತದಾರರು ಪ್ರವಾಸಕ್ಕೆ ಯೋಜನೆ ಹಾಕಿಕೊಂಡು ತೆರಳಿದರೆ ಮತದಾನದ ಪ್ರಮಾಣ ಕಡಿಮಯಾದೀತು ಎಂಬ ಲೆಕ್ಕಾಚಾರದೊಂದಿಗೆ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಮುಚ್ಚಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಮೈಸೂರು ಮೃಗಾಲಯ ಎಂದೇ ಜನಪ್ರಿಯವಾಗಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಕಾರಂಜಿ ಕೆರೆಯನ್ನು ಏಪ್ರಿಲ್ 26 ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.