ಬೆಂಗಳೂರು:- ರಸ್ತೆ ಗುಂಡಿ ದುರಸ್ತಿ ಕಾಮಗಾರಿ ಹಿನ್ನೆಲೆ, ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ವಾಹನ ಸಂಚಾರ ಬಂದ್ ಆಗಲಿದೆ.
WhatsApp: ಕಾಂಟೆಕ್ಸ್ ಲಿಸ್ಟ್ʼನಲ್ಲಿ ನಂಬರ್ ಸೇವ್ ಮಾಡದೆ ವಾಟ್ಸ್ʼಆ್ಯಪ್ʼನಲ್ಲಿ ಮೆಸೇಜ್ ಕಳುಹಿಸುವುದು ಹೇಗೆ..?
ಬಿಬಿಎಂಪಿ ಇಂದಿನಿಂದ ಆಗಸ್ಟ್ 21ರವರೆಗೆ ವೀರಣ್ಣಪಾಳ್ಯದಿಂದ ಹೆಬ್ಬಾಳ ಜಂಕ್ಷನ್ ಕಡೆಗೆ ಹೊರ ವರ್ತುಲ ರಸ್ತೆಯ ಸರ್ವೀಸ್ ರಸ್ತೆಯ ಗುಂಡಿ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಿದೆ. ಹೀಗಾಗಿ ಈ 4 ದಿನಗಳಲ್ಲಿ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜೊತೆಗೆ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗೆ ಹೋಗುವ ಪ್ರಯಾಣಿಕರು ಹೊರವರ್ತುಲ ರಸ್ತೆಯ ಮುಖ್ಯರಸ್ತೆಯನ್ನು ಪರ್ಯಾಯವಾಗಿ ಬಳಸಲು ಕೋರಲಾಗಿದೆ.
ಬೆಂಗಳೂರು ನಗರ ಸಂಚಾರಿ ಪೊಲೀಸರು ಈ ಸಮಯದಲ್ಲಿ ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಜೊತೆಗೆ ಅನಾನುಕೂಲತೆಗಾಗಿ ಕ್ಷಮೆಯಾಚಿಸಿದ್ದಾರೆ.
ಆಗಸ್ಟ್ 14 ರಂದು, ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು X ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು. ಬೆಂಗಳೂರಿನಲ್ಲಿ ದುರಸ್ತಿಯಾಗದ ರಸ್ತೆಯನ್ನು ತೋರಿಸಿ, ಸಮಸ್ಯೆಯನ್ನು ಪರಿಹರಿಸುವಂತೆ BBMP ಮತ್ತು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಗೆ ಒತ್ತಾಯಿಸಿದ್ದರು.