ಬೆಂಗಳೂರು: ಅರಮನೆ ಮೈದಾನದಲ್ಲಿ ಇಂದಿನಿಂದ 3 ದಿನ ಕಂಬಳ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ವಾಹನ ಮಾರ್ಗಸೂಚಿ ನೀಡಿದ್ದಾರೆ. ಕಂಬಳ ವೀಕ್ಷಣೆಗೆ ಬರುವವರ ಪ್ರವೇಶ ವಾಹನ ನಿಲುಗಡೆಗೆ ಪ್ರತ್ಯೇಕ ಸ್ಥಳ ವ್ಯವಸ್ಥೆ ಮಾಡಲಾಗಿದೆ. ಸಿಬಿಡಿ ಏರಿಯಾ, ಮೇಖ್ರಿ ಸರ್ಕಲ್ ಬಳಿಯಿಂದ ಬರುವ ವಾಹನಗಳಿಗೆ ಗೇಟ್ ನಂ.1 ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹೆಬ್ಬಾಳ, ಮೇಖ್ರಿ ಸರ್ಕಲ್ ಅಂಡರ್ ಪಾಸ್, ಯಶವಂತಪುರ ಕಡೆಯಿಂದ ಬರುವ ವಾಹನಗಳಿಗೆ ಗೇಟ್ ನಂ.1 ರ ಮೂಲಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಕ್ಯಾಬ್ನಲ್ಲಿ ಬರುವವರು ಗೇಟ್ ನಂಬರ್ 2ರ ಮೂಲಕ ಪ್ರವೇಶಿಸಬೇಕು. ಗೇಟ್ ನಂಬರ್ 3ರ ಮೂಲಕ ಕ್ಯಾಬ್ಗಳು ನಿರ್ಗಮಿಸಬೇಕು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮ ಹೊರತುಪಡಿಸಿ ಸಂಚರಿಸುವ ಸವಾರರಿಗೆ ಮಾರ್ಗಸೂಚಿ
![Demo](https://ainlivenews.com/wp-content/uploads/2023/12/spoorthi-1.jpg)
ಅರಮನೆ ರಸ್ತೆ, ಬಿಡಿಎ ಜಂಕ್ಷನ್ನಿಂದ ಚಕ್ರವರ್ತಿ ಲೇಔಟ್ ಸೇರಿದಂತೆ ವಸಂತನಗರ ಅಂಡರ್ ಪಾಸ್ನಿಂದ ಹಳೇ ಉದಯ ಟಿವಿ ಜಂಕ್ಷನ್ವರೆಗೆ ಎಂ.ವಿ ಜಯರಾಂ ರಸ್ತೆ ಬಳಸುವಂತೆ ಸೂಚಿಸಿದ್ದಾರೆ. ಮೇಖ್ರಿ ವೃತ್ತದಿಂದ LRDE ಜಂಕ್ಷನ್ವರೆಗೆ ಬಳ್ಳಾರಿ ರಸ್ತೆ ಬಳಸಬೇಕು. ಅರಮನೆ ರಸ್ತೆಯಲ್ಲಿ ಸಂಚರಿಸುವವರು ಜಯಮಹಲ್ ರಸ್ತೆ ಬಳಸಬೇಕು. ಪ್ಯಾಲೆಸ್ ರಸ್ತೆ, ಎಂ.ವಿ.ಜಯರಾಂ ರಸ್ತೆ, ಸಿ.ವಿ.ರಾಮನ್ ರಸ್ತೆ, ವಸಂತ ನಗರ ರಸ್ತೆ, ಜಯಮಹಲ್ ರಸ್ತೆ, ರಮಣ ಮಹರ್ಷಿ ರಸ್ತೆ, ನಂದಿ ದುರ್ಗ ರಸ್ತೆ, ಬಳ್ಳಾರಿ ರಸ್ತೆ, ಮೌಂಟ್ ಕಾರ್ಮಲ್ ರಸ್ತೆ ಬಳಿ ವಾಹನ ನಿಲುಗಡೆಗೆ ನಿರ್ಬಂಧಿಸಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)