ಹಾವೇರಿ: ಹಾವೇರಿ ಶಿವಾಜಿ ನಗರ ಮೂರನೇ ಕ್ರಾಸ್ ಬಳಿ ಕಾಲುವೆಯಲ್ಲಿ ಹತ್ತು ವರ್ಷದ ಬಾಲಕನೊಬ್ಬ ಜಾರಿ ಬಿದ್ದಿದ್ದಾನೆ.ನೀವೆದನ್ ಬಸವರಾಜ್ ಗುಡಗೇರಿ (12) ಮೃತಪಟ್ಟ ಬಾಲಕ. ನಸುಕಿನ ಜಾವದಿಂದ ಸುರಿದ ಭಾರಿ ಮಳೆಗೆ ಕಾಲುವೆ, ರಾಜಕಾಲುವೆ ಭರ್ತಿಯಾಗಿ ರಭಸವಾಗಿ ಹರಿಯುತ್ತಿತ್ತು. ಮೂರ್ನಾಲ್ಕು ಮಕ್ಕಳು ಆಟವಾಡುತ್ತಿದ್ದರು.
Railway Jobs: ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗಾವಕಾಶ! ಲಿಖಿತ ಪರೀಕ್ಷೆ ಇಲ್ಲ – ತಿಂಗಳ ವೇತನ 2 ಲಕ್ಷ ರೂ/-
ಈ ವೇಳೆ ತೆರೆದ ಕಾಲುವೆ ದಾಟಲು ಮುಂದಾದಾಗ ಬಾಲಕ ಕಾಲುಜಾರಿ ಕಾಲುವೆಗೆ ಬಿದ್ದಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸ್, ನಗರಸಭೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕನ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸ್ಥಳೀಯರ ಆಕ್ರೋಶ
ಕಾಲುವೆ ಕಾಮಗಾರಿ ಸರಿಯಾಗಿ ಮಾಡಿಲ್ಲ. ಅಲ್ಲಲ್ಲಿ ಕಾಲುವೆಯನ್ನು ತೆರೆದು ಕೈಬಿಡಲಾಗಿದೆ. ಇದೇ ಕಾರಣಕ್ಕೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲಕಾಲ ರಸ್ತೆ ಸಂಚಾರ ತಡೆದು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.