ಕೊಪ್ಪಳ:- ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಅಯೋಧ್ಯೆಗೆ ತೆರಳುತ್ತಿದ್ದ ಕೊಪ್ಪಳದ ಯುವಕ ದುರಂತ ಸಾವನ್ನಪ್ಪಿದ್ದಾರೆ.
ನವಜಾತ ಶಿಶುಗಳ ಮರಣ ಮೃದಂಗ: ಅಂಕಿಅಂಶಗಳನ್ನು ನೋಡಿದರೇ ಬೆಚ್ಚಿ ಬೀಳ್ತಿರಾ..?
ರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ತೆರಳುತ್ತಿದ್ದ ವೇಳೆ ದುರಂತ ಸಾವು ಕಂಡಿದ್ದಾನೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸಿದ್ದಾಪುರ ನಿವಾಸಿ ಪ್ರವೀಣ್ ಹೊಸಮನಿ(27) ಮೃತ ದುರ್ವೈವಿ. ಅಯೋಧ್ಯೆಗೆ ತೆರಳುತ್ತಿದ್ದ ಪ್ರವೀಣ್ ಗೋರಖ್ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ.
ಪ್ರವೀಣ್ ಹೊಸಮನಿ ಎನ್ನುವ ಯುವಕ ಕಳೆದ 15 ದಿನದ ಹಿಂದೆಯೇ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳಿದ್ದ. 144 ವರ್ಷಕ್ಕೊಮ್ಮೆ ನಡೆಯುವ ಈ ಮಹಾಕುಂಭಮೇಳದಲ್ಲಿ ಭಾಗವಹಿಸಿ ಎಲ್ಲವನ್ನೂ ಕಣ್ತುಂಬಿಕೊಂಡಿದ್ದ. ಅಲ್ಲದೇ ತ್ರಿವೇಣಿ ಸಂಗಮದಲ್ಲೂ ಸಹ ಪುಣ್ಯ ಸ್ನಾನ ಮಾಡಿದ್ದ. ಬಳಿಕ ರಾಮನ ದರ್ಶನ ಪಡೆಯಲೆಂದು ಪ್ರಯಾಗ್ರಾಜ್ನಿಂದ ಅಯೋಧ್ಯೆಗೆ ಹೊರಟ್ಟಿದ್ದಾನೆ. ಆದ್ರೆ, ದುರದೃಷ್ಟವಶಾತ್ ರಾಮನ ಜನ್ಮಸ್ಥಳಕ್ಕೆ ಕಾಲಿಡುವ ಮುನ್ನವೇ ಮಾರ್ಗ ಮಧ್ಯೆ ಗೋರಖ್ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ತಗುಲಿ ಪ್ರವೀಣ್ ಸಾವನ್ನಪ್ಪಿದ್ದಾನೆ.