ಗದಗ: ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯಶ್ ಅಭಿಮಾನಿಗಳ ಕುಟುಂಬಕ್ಕೆ ಶಿರಹಟ್ಟಿ ಶಾಸಕ ಡಾ. ಚಂದ್ತು ಲಮಾಣಿ ತಲಾ 25 ಸಾವಿರ ರೂಪಾಯಿ ಚೆಕ್ ವಿತರಣೆ ಮಾಡಿದ್ದಾರೆ. ಹೌದು ಈಗಾಗಲೇ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಈಗ ಶಿರಹಟ್ಟಿ ಶಾಸಕ ಡಾ. ಚಂದ್ತು ಲಮಾಣಿಯವರು ಸಾವನ್ನಪ್ಪಿದ ಮೂರೂ ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ಚೆಕ್ ವಿತರಣೆ ಮಾಡಿದ್ದಾರೆ.
ಖ್ಯಾತ ನಟ ಯಶ್ ಅವರ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಯುವಕರು ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ.