ಬೆಂಗಳೂರು: ಸಂಸದ ಡಿಕೆ ಸುರೇಶ್ ಭಾರತ ವಿಭಜನೆ ಹೇಳಿಕೆ ಈಗ ಕೋರ್ಟ್ ಅಂಗಳ ತಲುಪಿದೆ. ಬಂಟ್ವಾಳ ಮೂಲದ ವಿಕಾಸ್ ಪಿ ಎಂಬುವವರು ಡಿಕೆಸು ವಿರುದ್ಧ 2ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿದ್ದಾರೆ. ಡಿ ಕೆ ಸುರೇಶ್ ಅವರ ಹೇಳಿಕೆ ದೇಶ ವಿರೋಧಿ ಮತ್ತು ಪ್ರಚೋದನಕಾರಿ ಹೇಳಿಕೆಯಾಗಿದೆ. ಐಪಿಸಿ ಸೆಕ್ಷನ್ 124(ಎ) ಪ್ರಕಾರ ಡಿಕೆಸು ಹೇಳಿಕೆ ಶಿಕ್ಷಾರ್ಹ ಅಪರಾಧ ಆಗಲಿದೆ. ದೇಶದ ನಾಗರೀಕರಿಗೆ ಡಿಕೆಸು ಹೇಳಿಕೆ ಮಾನಸಿಕ ಆಘಾತ ತಂದಿದೆ.
Jalebi with milk: ಬಿಸಿ ಹಾಲಿನ ಜೊತೆ ಜಿಲೇಬಿ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?
ಹೀಗಾಗಿ ನ್ಯಾಯಾಲಯವು ಈ ಹೇಳಿಕೆ ಕುರಿತ ಮುಂದಿನ ತನಿಖೆಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ನಿರ್ದೇಶಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಇನ್ನೊಂದು ಕಡೆ ಸಂಸದ ಡಿಕೆಸು ಹೇಳಿಕೆ ವಿರುದ್ಧ ಲೋಕಸಭೆ ಸ್ಪೀಕರ್ ಅವರಿಗೂ ದೂರು ಸಲ್ಲಿಸಲಾಗಿದೆ. ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿಅವರು ಲೋಕಸಭೆ ಸ್ಪೀಕರ್ಗೆ ಎರಡು ಪುಟಗಳ ಪತ್ರದ ಮೂಲಕ ದೂರು ಸಲ್ಲಿಸಿದ್ದಾರೆ.