ರಾಮನಗರ: ಡಿಕೆ ಶಿವಕುಮಾರ್ ಅವರು ಚನ್ನಪಟ್ಟಣದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಸುಳಿವಿನ ಬೆನ್ನಲ್ಲೇ ಅವರು ಟೆಂಪಲ್ ರನ್ ನಡೆಸುತ್ತಿದ್ದಾರೆ. ಚನ್ನಪಟ್ಟಣಕ್ಕೆ ಭೇಟಿ ಕೊಟ್ಟ ಡಿಕೆಶಿ ಪ್ರಮುಖ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆಯನ್ನು ನಡೆಸಿದರು. ಡಿಕೆಶಿ ಚನ್ನಪಟ್ಟಣದ ಪೇಟೆ ಬೀದಿಯ ಶ್ರೀ ನೀಲಕಂಟೇಶ್ವರ ದೇಗುಲದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಬುಧವಾರ ಪೂಜೆ ಸಲ್ಲಿಸಿದರು. ಬಳಿಕ ಚನ್ನಪಟ್ಟಣದ ಕೋಟೆಯ ಕಾಳಿಕಾಂಬ ದೇಗುಲದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಪೂಜೆ ಸಲ್ಲಿಸಿದರು.
Masala Peanuts: ಬೇಕರಿಯಲ್ಲಿ ಸಿಗುವ ಮಸಾಲಾ ಶೇಂಗಾ ಮನೆಯಲ್ಲೇ ಮಾಡಿ..! ಇಲ್ಲಿದೆ ರೆಸಿಪಿ
ಇದಕ್ಕೂ ಮೊದಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚನ್ನಪಟ್ಟಣದ ಕೆಂಗಲ್ ಆಂಜನೇಯ ಸ್ವಾಮಿ ದೇಗುಲಕ್ಕೆ ಬುಧವಾರ ಭೇಟಿ ಮಾಡಿ ಪೂಜೆ ಸಲ್ಲಿಸಿದರು. ಈ ವೇಳೆ ಎಂಎಲ್ಸಿ ಎಸ್ ರವಿ, ಬೆಂಗಳೂರು – ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ ಅಧ್ಯಕ್ಷರಾದ ರಘುನಂದನ್ ರಾಮಣ್ಣ, ಮಾಜಿ ಶಾಸಕ ಎಂ ಸಿ ಅಶ್ವಥ್, ಕಾಂಗ್ರೆಸ್ ರಾಮನಗರ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ ದೂಂತುರು ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.