ಬೆಂಗಳೂರು:- ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಅವರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿಕ ತುಕಾಲಿ ಸಂತೋಷ್ ಕಾರಿಗೆ ಆಟೋ ಡಿಕ್ಕಿಯಾಗಿತ್ತು. ಈ ವೇಳೆ ಆಟೋ ಡ್ರೈವರ್ ಜಗದೀಶ್ ಅವರಿಗೆ ಗಂಭೀರ ಗಾಯಗಳಾಗಿದ್ದವು.
ಜಗದೀಶ್ ಅವರನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಇನ್ನೂ ಮೃತ ಜಗದೀಶ್ ಮದ್ಯ ಸೇವಿಸಿ ಆಟೋ ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆ ನಡೆದದ್ದು ಹೇಗೆ?
ಕುಣಿಗಲ್ ಹೈವೆಯಲ್ಲಿ ತುಕಾಲಿ ಸಂತೋಷ್ ಕಾರು ಅಪಘಾತ ನಡೆದಿದೆ. ತುಕಾಲಿ ಸಂತೋಷ್ ಕಾರಿಗೆ ಆಟೋ ಚಾಲಕನೇ ಬಂದು ಗುದ್ದಿದ್ದಾನೆ. ತುಮಕೂರಿನಲ್ಲಿ ಶೂಟಿಂಗ್ ಮುಗಿಸಿ ಮಂಡ್ಯಕ್ಕೆ ತೆರಳೋ ವೇಳೆ ಈ ಅಪಘಾತ ನಡೆದಿದೆ. ರಾತ್ರಿ ಏಳು ಗಂಟೆ ವೇಳೆಯಲ್ಲಿ ಅಪಘಾತ ಆಗಿದೆ.
ತುಕಾಲಿ ಸಂತೋಷ್ ಹೇಳಿದ್ದೇನು?
ಆಟೋ ಡ್ರೈವರ್ ಏಕಾಏಕಿ ಬಂದು ನಮ್ಮ ಕಾರಿಗೆ ಡಿಕ್ಕಿ ಹೊಡೆದರು. ನಾವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದೆವು. ನಮ್ಮ ಕಾರು ಈಗ ಕುಣಿಗಲ್ ಪೊಲೀಸ್ ಠಾಣೆಯಲ್ಲಿದೆ. ಪೊಲೀಸರು ನಾಳೆ ಬನ್ನಿ ಅಂತ ಹೇಳಿದ್ದಾರೆ ಎಂದು ತುಕಾಲಿ ಸಂತೋಷ್ ಹೇಳಿದ್ದಾ