ತುಮಕೂರು:-ತುಮಕೂರು ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಡಿಸಿಎಂ ಅಮೆರಿಕ ಪ್ರವಾಸ ತೆರಳುವ ಮುನ್ನ BBMPಗೆ ವಾರ್ನಿಂಗ್: ಏನಂತೀರಾ?
ಶುಕ್ರವಾರ, ಶನಿವಾರ ಗೌರಿ ಗಣೇಶ ಹಬ್ಬವಿದ್ದ ಕಾರಣ ಸಾಕಷ್ಟು ಮಂದಿ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಿದ್ರು. ಈ ವೇಳೆ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಟ್ಟು ಆರು ಜನರು ಸಾವನ್ನಪ್ಪಿದ್ದು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಗ್ರಾಮದ ಬಳಿ ಘಟನೆ ನಡೆದಿದ್ದು ಅಪಘಾತ ನಡೆದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲೋಕ್ ಕುಮಾರ್ ಅವರು ಅಪಘಾತದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಪಘಾತ ಹೇಗಾಯ್ತು? ಮೃತರ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಅಪಘಾತ ಸಂಬಂಧ ಮಾತನಾಡಿದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಕೊರಟಗೆರೆ ಕಡೆಗೆ ಮಾರುತಿ ಸಿಯಾಜ್ ಕಾರು ಹೊರಟಿತ್ತು. ಮಧುಗಿರಿ ಕಡೆಗೆ ಟಾಟಾ ಟಿಯಾಗೋ ತೆರಳುತ್ತಿತ್ತು. ಓವರ್ಟೇಕ್ ವೇಳೆ ಸಿಯಾಜ್ ಕಾರು ಬಲಬದಿ ಲೇನ್ಗೆ ನುಗ್ಗಿ ಅಪಘಾತ ಸಂಭವಿಸಿದೆ. ಸಿಯಾಜ್ ಕಾರಿನಲ್ಲಿ ಚಾಲಕ ಸಮೇತ ಒಟ್ಟು 7 ಜನ ಪ್ರಯಾಣಿಸುತ್ತಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್ ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ಎದುರಿಗೆ ಬರ್ತಿದ್ದ ಟಾಟಾ ಟಿಯಾಗೋ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಮಧುಗಿರಿ ಕಡೆಗೆ ಹೋಗ್ತಿದ್ದ ನಾಗರಾಜ್, ಸಿದ್ದಗಂಗಾ ಮೃತಪಟ್ಟಿದ್ದಾರೆ. ಬೆಂಗಳೂರಿಗೆ ಹೋಗ್ತಿದ್ದ ಸಿಂಧೂ, ಜನಾರ್ಧನ್ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಮಾಹಿತಿ ನೀಡಿದರು.