ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ನದೀಯಾ (19) ಮೃತರು.
ಮಳವಳಿ ತಾಲೂಕಿನ ಹಲಗೂರಿನ ಮುತ್ತತ್ತಿಯ ಆಂಜನೇಯ ಸ್ವಾಮಿ ದೇವರ ಕಾರ್ಯಕ್ಕೆಂದು ತೆರಳಿದ್ದರು. ಈ ವೇಳೆ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಗಾಣಾಳು ಗ್ರಾಮದ ಸುಮಾರು 50 ಕ್ಕೂ ಹೆಚ್ಚು ಮಂದಿ ತೆರಳಿದ್ದರು. ಈ ವೇಳೆ ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾಹಿತಿ ನೀಡಿದ ಕೂಡಲೇ ಹಲಗೂರು ಪೊಲೀಸರು ಸ್ಥಳಕ್ಕಾಗಿಮಿಸಿದ್ದು, ಇಬ್ಬರ ಶವವನ್ನು ಹೊರಕ್ಕೆ ತೆಗೆದಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.