ಮುಂಬೈ: ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಯಕರೊಬ್ಬರ ಪುತ್ರನಿಗೆ ಸೋಷಿಯಲ್ ಮೀಡಿಯಾವೊಂದರ ‘ಲೈವ್’ನಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಶಿವಸೇನೆಯ UBT ನಾಯಕನ ಮಗ ಅಭಿಷೇಕ್ ಘೋಸಲ್ಕರ್ ಅವರೊಂದಿಗೆ ಲೈವ್ ಮಾಡುವಾಗ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ನಂತರ ದಾಳಿಕೋರ ತನ್ನ ಮೇಲೆಯೇ ಬಂದೂಕನ್ನು ತಿರುಗಿಸಿದ್ದಾನೆ. ಫೇಸ್ಬುಕ್ ಲೈವ್ನಲ್ಲಿ ಚಿತ್ರೀಕರಣದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘೋಸಲ್ಕರ್ ಮತ್ತು ಅವರ ಮೇಲಿನ ದಾಳಿಕೋರ ಇಬ್ಬರೂ ಮೃತಪಟ್ಟಿದ್ದಾರೆ. ದಹಿಸರ್ ಪ್ರದೇಶದ MHB ಕಾಲೊನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೆಲವು ಭಿನ್ನಾಭಿಪ್ರಾಯಗಳ ನಂತರ ಇಬ್ಬರು ಇತ್ತೀಚೆಗೆ ಹೊಂದಾಣಿಕೆ ಮಾಡಿಕೊಂಡಿದ್ದರು. ವೆಬ್ಕಾಸ್ಟ್ ಆಗುತ್ತಿರುವ ಕಾರ್ಯಕ್ರಮಕ್ಕಾಗಿ ಘೋಸಲ್ಕರ್ ಅವರನ್ನು ಅವರ ಕಚೇರಿಗೆ ಆಹ್ವಾನಿಸಲಾಯಿತು. ಗುಂಡಿನ ದಾಳಿಯ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.