ತುಮಕೂರು:– ಸಾಲಬಾಧೆ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆಗೆ ಶರಣಾಹಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಅರಳಗುಪ್ಪೆಯಲ್ಲಿ ಜರುಗಿದೆ.
ಯಾದಗಿರಿ: ಗ್ಯಾಸ್ ಸಿಲಿಂಡರ್ ಸ್ಪೋಟ… ನಾಲ್ಕು ಗುಡಿಸಲು ಭಸ್ಮ..!
ಭಾಗ್ಯಮ್ಮ (50) ಆತ್ಮಹತ್ಯೆಗೆ ಶರಣಾದ ಮಹಿಳೆ ಎನ್ನಲಾಗಿದೆ. ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ ಭಾಗ್ಯಮ್ಮ 5ಲಕ್ಷ ಸಾಲ ಪಡೆದಿದ್ದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಆರೋಪ ಕೇಳಿ ಬಂದಿದೆ. ತೀವ್ರ ಬರಗಾಲ ಹಿನ್ನೆಲೆ ಹಣ ಕಟ್ಟಲು ಸಾಧ್ಯವಾಗದೇ ಭಾಗ್ಯಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೈಕ್ರೋ ಫೈನಾನ್ಸ್ ಕಂಪನಿ ಹಾಗೂ ಸಿಬ್ಬಂದಿಗಳ ವಿರುದ್ದ ಕ್ರಮ ಜರುಗಿಸುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸರು ಭೇಟಿ,ಪರಿಶೀಲನೆ ಮಾಡಿದ್ದಾರೆ.
ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.