ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಕೇಸ್: ಬಿಬಿಎಂಪಿ ಅಧಿಕಾರಿ ಸಸ್ಪೆಂಡ್!

ಬೆಂಗಳೂರು:- ಬಾಬುಸಾಬ್​ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆ ಬಿಬಿಎಂಪಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಕೊನೆಗೂ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡ ಯೋಗೇಶ್ವರ್: ಆರ್ ಅಶೋಕ್! ಬಿಬಿಎಂಪಿ ಹೊರಮಾವು ಉಪವಿಭಾಗದ ಎಇಇ ಕೆ.ವಿನಯ್ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. ಕಟ್ಟಡ ತೆರವಿಗೆ ಸ್ಥಿರೀಕರಣ ಆದೇಶ ಹೊರಡಿಸಿದ್ದರೂ ಎಇಇ ಕೆ.ವಿನಯ್​ ನಿಗದಿತ ಅವಧಿಯೊಳಗೆ ಕ್ರಮಕೈಗೊಂಡಿಲ್ಲ. ಮೇಲ್ನೋಟಕ್ಕೆ 8 ಕಾರ್ಮಿಕರ ಸಾವಿಗೆ ಕಾರಣಕರ್ತರಾಗಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.