ಬೆಂಗಳೂರು: ಸಂಸತ್ (Parliament) ಮೇಲಿನ ದಾಳಿಗೆ ನಿರುದ್ಯೋಗ ಕಾರಣ ಎಂಬ ರಾಹುಲ್ ಗಾಂಧಿ ಹೇಳಿಕೆ ಚೈಲ್ಡಿಶ್ ಹೇಳಿಕೆ ಅಂತ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಹೇಳಿಕೆ ಚೈಲ್ಡಿಶ್ ಹೇಳಿಕೆ. ನಿರುದ್ಯೋಗ ಸಮಸ್ಯೆ ಬಗ್ಗೆ ಚರ್ಚೆ ಆಗಲಿ ಬೇಡ ಅನ್ನೊಲ್ಲ. ನಿರುದ್ಯೋಗ ಇದೆ ಅಂತ ಹೇಳಿ ಕೊಲೆ ಮಾಡ್ತೀನಿ, ಎಂಪಿಯನ್ನ, ಕೊಲೆ ಮಾಡ್ತೀನಿ ಅಂದ್ರೆ. ಕರ್ನಾಟಕದಲ್ಲಿ ನಿರುದ್ಯೋಗ ಇಲ್ಲವಾ? ಛತ್ತೀಸ್ಗಢದಲ್ಲಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಇತ್ತು ಅಲ್ಲಿ ನಿರುದ್ಯೋಗ ಇಲ್ಲವಾ. ನಿರುದ್ಯೋಗ ಇದೆ ಅಂತ ದೇಶದ ವಿರೋಧಿ, ದೇಶದ್ರೋಹಿ, ಟೆರರಿಸ್ಟ್ ಜೊತೆ ಲಿಂಕ್ ಇಟ್ಟುಕೊಳ್ಳುವ ಸಂಘಟನೆ ಜೊತೆ ಹೀಗೆ ಮಾಡೋಕೆ ನಿಮ್ಮ ಬೆಂಬಲ ಇದೆಯಾ ರಾಹುಲ್ ಗಾಂಧಿ ಅಂತ ಪ್ರಶ್ನೆ ಮಾಡಿದ್ರು.
ಮರ್ಡರ್ ಮಾಡಿದವನಿಗೂ ಅವನದ್ದೇ ಲಾಜಿಕ್ ಇರತ್ತೆ. ಆದರೆ ಇದನ್ನ ಸಮಾಜ ಒಪ್ಪುತ್ತಾ? ರಾಹುಲ್ ಗಾಂಧಿ ಎಷ್ಟು ಚೈಲ್ಡಿಶ್ ಆಗಿ ಮಾತಾಡ್ತಾ ಇದ್ದೀರಾ. ಮೋದಿ ವಿರೋಧ ಮಾಡೋ ಭರದಲ್ಲಿ ರಾಷ್ಟ್ರದ್ರೋಹಿಗಳನ್ನ ಸಮರ್ಥನೆ ಮಾಡಿಕೊಳ್ತೀರಾ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge), ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಡಬೇಕು. ರಾಹುಲ್ ಹೇಳಿಕೆ ಇನ್ ಮೆಚ್ಯೂರ್ಡ್ ಹೇಳಿಕೆ. ನಿರುದ್ಯೋಗದ ಬಗ್ಗೆ ಪ್ರತ್ಯೇಕ ಚರ್ಚೆ ಮಾಡಲಿ. ಅದಕ್ಕೆ ಉತ್ತರ ಕೊಡೋಕೆ ನಾವು ತಯಾರು ಇದ್ದೇವೆ. ಜಗತ್ತಿನಲ್ಲಿ ವೇಗವಾಗಿ ಬೇಳೆಯುತ್ತಿರೋ ಆರ್ಥಿಕ ನಮ್ಮದು. ಉದ್ಯೋಗ ಸಿಗದೇ ಆರ್ಥಿಕತೆ ಬೆಳೆಯುತ್ತದೆಯಾ? ಯಾರಾದ್ರು ನಾಳೆ ಮರ್ಡರ್ ಮಾಡಿದ್ರು, ರೇಪ್ ಮಾಡಿದ್ರು ಆಗ ಅವನಿಗೆ ಕೆಲಸ ಸಿಗಲಿಲ್ಲ. ಅದಕ್ಕೆ ಮಾಡಿದ ಅಂತ ಹೇಳಿದ್ರೆ ಅದಕ್ಕೆ ಸಮರ್ಥನೆ ಇದೆಯಾ? ಸಮಾಜವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗೋಕೆ ಮಾಡ್ತಿದ್ದೀರಾ? ಈ ರೀತಿ ಸಮರ್ಥನೆ ಮಾಡೋದು ದೇಶಕ್ಕೆ ಮಾಡೋ ಅನ್ಯಾಯ ಅಂತ ವಾಗ್ದಾಳಿ ನಡೆಸಿದರು.