ಮಂಡ್ಯ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಡೆಯುವ ಜನತಾದರ್ಶನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮಂಡ್ಯದ ಶಕ್ತಿ ದೇವತೆ ಶ್ರೀ ಕಾಳಿಕಾಂಬ ದೇವಾಲಯಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು.
ರಾತ್ರಿ 9 ಗಂಟೆಯ ನಂತ್ರ ಊಟ ಮಾಡ್ತೀರಾ..? ಹಾಗಿದ್ರೆ ಈ ಎಲ್ಲಾ ಸಮಸ್ಯೆಗಳು ಎದುರಾಗುವುದು ಗ್ಯಾರಂಟಿ
ಕುಮಾರಸ್ವಾಮಿ ಗೆಲುವು ಸಾಧಿಸಿದರೆ ವಿಶೇಷ ಪೂಜೆ ಸಲ್ಲಿಸುವುದಾಗಿ ದೇವಾಲಯದ ಮುಂದೆ ಇರುವ ಬನ್ನಿ ಮರಕ್ಕೆ ಬಿಜೆಪಿ ಮುಖಂಡ ಶಿವಕುಮಾರ್ ಆರಾಧ್ಯ ಅವರು ಹರಕೆ ಕಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಹರಕೆ ಕಟ್ಟು ಬಿಚ್ಚಿ ದೇವರಿಗೆ ಅರ್ಪಿಸಿದರು.