ಬೆಂಗಳೂರು:-ಕರ್ನಾಟಕ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
Hubballi: ಶಂಕಿತ 399 ಮಾದಕ ವ್ಯಸನಿಗಳು ವಶಕ್ಕೆ: ಕಮಿಷನರ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ!
ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸೇರಿ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಭಾಗಿಯಾಗಿದ್ದಾರೆ. ಇದು ಅತಿ ದೊಡ್ಡ ಹಗರಣ, ಎರಡು ದೊಡ್ಡ ಹಗರಣ ನಡೆದಿದೆ ಎನ್ನಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜೊತೆಗೆ ಇಲ್ಲಿನ ಹಣವನ್ನು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕರು ಹಣ ವರ್ಗಾವಣೆ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಆದೇಶದ ಬಗ್ಗೆ ಸಂಪೂರ್ಣ ತಿಳುವಳಿಕೆಯಿಂದ ಈ ರೀತಿ ಮಾಡಲಾಗಿದೆ ಎನ್ನಲಾಗಿತ್ತು. ರಾಹುಲ್ ಗಾಂಧಿಗೂ ಇದರ ಸಂಪೂರ್ಣ ಅರಿವಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಫಲಾನುಭವಿಗಳನ್ನ ಮುಚ್ಚಿಡಲು ನೀತಿ ಆಯೋಗದ ಸಭೆಗೂ ಗೈರಾಗಿದೆ ಎಂದಿದ್ದಾರೆ. ಸಿಎಂ ಮೊದಲು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮೋದಿ ಸರ್ಕಾರದ ಭ್ರಷ್ಟಾಚಾರ ರಹಿತ ಆಡಳಿತ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು 14 ತಿಂಗಳಲ್ಲಿ ಇಷ್ಟೊಂದು ಭ್ರಷ್ಟಾಚಾರ ನಡೆದಿದ್ದು, 100 ಪ್ರತಿಶತ ಭ್ರಷ್ಟಾಚಾರದ ಸಿಎಂ ಎಂದು ಕಿಡಿಕಾರಿದರು