ಹುಬ್ಬಳ್ಳಿ: ಲೋಕಸಭೆ ಚುನಾವಣೆ ಯನ್ನು ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಎದುರಿಸುತ್ತಿದೆ. ಎರಡೂ ಪಕ್ಷದವರು ಒಂದೆಡೆ ಸೇರಿ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ. ಅದೇ ರೀತಿಯಾಗಿ ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದು, ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಹಾಲುಮತ ಸಮಾಜಕ್ಕಾದ ಅವಮಾನ ಖಂಡಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಶಿವಾನಂದ ಮುತ್ತಣ್ಣವರ
ನಗರದಲ್ಲಿಂದು ನಡೆದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೂಡ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ ಅವರು ಮಾತನಾಡಿದರು,
ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸುವ ಸಲುವಾಗಿ ಜಾತ್ಯಾತೀತ ಜನತಾದಳ ಪಕ್ಷವು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ್ದು, ಇಂದು, ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಲಾಯಿತು. ಮಾಜಿ ಪ್ರಧಾನಮಂತ್ರಿ ಎಚ್ಡಿ ದೇವೇಗೌಡ ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರೆಲ್ಲರೂ ಬಿಜೆಪಿಯನ್ನು ಬೆಂಬಲಿಸಿ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವ ಭರವಸೆ ನೀಡಿದರು ಎಂದಿದ್ದಾರೆ.
ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಗುರುರಾಜ ಹುಣಸಿಮರದ, ಮಾಜಿ ಸಚಿವರಾದ ಕೆ.ಎನ್.ರೆಡ್ಡಿ, ಜೆಡಿಎಸ್ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಬಿ ಬಿ ಗಂಗಾಧರಮಠ, ವೀರಭದ್ರಪ್ಪ ಹಾಲಹರವಿ, ಅಹ್ಮದ್ ಸಿ ಅರಸಿಕೇರಿ, ನವೀನ್ ಮಡಿವಾಳರ,
ಬಿಜೆಪಿ ಪ್ರಮುಖರಾದ ಪ್ರಭು ನವಲಗುಂದಮಠ ಹಾಗೂ ಪ್ರಮುಖರು ಉಪಸ್ಥಿತರಿದ್ದರು.