ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹು ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಈ ಪ್ರಕರಣದಲ್ಲಿ ಸಿಬಿಐ ಎಂಟ್ರಿಯಾಗಿದ್ದು ಹಲವರಿಗೆ ನೊಟೀಸ್ ಜಾರಿ ಮಾಡಲಾಗಿದೆ. ಇದರ ಮಧ್ಯೆ ಒಬ್ಬ ಸಚಿವರ ತಲೆದಂಡ ಕೂಡ ಆಗಿದೆ. ಆದರೆ ಇದೀಗ ಈ ಪ್ರಕರಣದಲ್ಲಿ ಹೊಸದೊಂದು ತಿರುವು ಪಡೆದಿದೆ. ಇದೀಗ ಮತ್ತೊಬ್ಬ ಸಚಿವರ ಹೆಸರು ತಳುಕು ಹಾಕಿಕೊಂಡಿದ್ದು, ಗಂಭೀರ ಆರೋಪ ಕೇಳಿ ಬಂದಿದೆ.
ವಾಲ್ಮೀಕಿ ನಿಗಮದ ಅಧಿಕಾರಿಯೊಬ್ಬನ ಆತ್ಮಹತ್ಯೆ ಬಳಿಕ ನಿಗಮದಲ್ಲಿ ನಡೆದ ಬೃಹತ್ ಅಕ್ರಮ ಹಣ ವರ್ಗಾವಣೆ ವಿಚಾರ ಬಹಿರಂಗವಾಯ್ತು. ಬಳಿಕ ನಾಗೇಂದ್ರ ತಲೆದಂಡ ಕೂಡ ಆಯ್ತು. ಇದೀಗ ಮತ್ತೊಬ್ಬ ಸಚಿವ, ಶಾಸಕರ ಶರಣು ಪ್ರಕಾಶ್ ಪಾಟೀಲ್ ಹೆಸರು ಕೂಡ ಇದರಲ್ಲಿ ತಳುಕು ಹಾಕಿಕೊಂಡಿದೆ. ಅಕ್ರಮದ ಸಾಕ್ಷ್ಯಗಳ ನಾಶಕ್ಕೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕಚೇರಿಯಲ್ಲೇ ಪ್ಲಾನ್ ಆಗಿತ್ತು ಅನ್ನೋ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಇದನ್ನ ತಿಳಿಸಲಾಗಿದೆ.
Google Search: ಒಂಟಿಯಾಗಿರುವಾಗ Googleನಲ್ಲಿ ಯುವತಿಯರು ಅತಿ ಹೆಚ್ಚು ಹುಡುಕಾಟ ನಡೆಸುವುದೇನು ಗೊತ್ತಾ..?
ಹೌದು, ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ಮೇ 24ರಂದು ಸಭೆ ನಡೆಸಲಾಗಿದೆ. ಅಕ್ರಮದ ಸಾಕ್ಷ್ಯಗಳ ನಾಶ ಕುರಿತು ಚರ್ಚೆಯಾಗಿದೆ. ಮಾ.24ರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗಿನ ಕಚೇರಿ ಸಿಸಿಟಿವಿ ಫೂಟೇಜ್ಗಳನ್ನು ವಶಪಡಿಸಿಕೊಳ್ಳಬೇಕು ಹಾಗೂ ಸಾಕ್ಷ್ಯ ನಾಶವಾಗದಂತೆ ನೋಡಿಕೊಳ್ಳುವಂತೆ ಲೆಕ್ಕಾಧಿಕಾರಿ ಪರುಶುರಾಮ್ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ.
ಇದರ ಜೊತೆಗೆ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಮೇಲೂ ಆರೋಪಿಸಿರುವ ಅವರು, ಸಚಿವರ ಕಚೇರಿಯಲ್ಲಿ ದದ್ದಲ್ ಸಭೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್,ಕಳೆದ ೨೪ರಂದು ನಾನು ಕಚೇರಿಗೆ ಹೋಗಿಯೇ ಇರಲಿಲ್ಲ ಎಂದಿದ್ದಾರೆ. ಅಲ್ಲಿಗೆ ಸಾಕಷ್ಟು ಜನ ಬರುತ್ತಾರೆ ಹೋಗುತ್ತಾರೆ. ನಮ್ಮ ಕಚೇರಿಯಲ್ಲಿ ಸಭೆ ಆಗಿರುವುದು ಗೊತ್ತಿಲ್ಲ. ಬೇಕಾದರೆ ಫುಟೇಜ್ ಪಡೆದು ಪರಿಶೀಲನೆ ನಡೆಸಲಿ ಎಂದಿದ್ದಾರೆ.
ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ ಬಸವನಗೌಡ ದದ್ದಲ್, ಸಚಿವರ ಹೆಸರನ್ನ ಸುಮ್ಮನೆ ಎಳೆದು ತರ್ತಿದ್ದಾರೆ. ಯಾರೇ ತಪ್ಪು ಮಾಡಿದ್ರು ಕಠಿಣ ಶಿಕ್ಷೆ ಆಗಲಿ. ಎಸ್ ಐಟಿ ತನಿಖೆಯಿಂದ ಸತ್ಯ ಹೊರ ಬರಲಿದೆ. ಎಸ್ ಐಟಿಯವ್ರು ನನ್ನ ಇನ್ನೂ ವಿಚಾರಣೆಗೆ ಕರೆದಿಲ್ಲ. ನಾನು ಕೂಡ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ ಬರೆಯುತ್ತೇನೆ. ಸಿಬಿಐ ಕೂಡ ಈಗಾಗಲೇ ಕೇಸ್ ಮಾಡಿಕೊಂಡಿದೆ. ಇದರಲ್ಲಿ ನನ್ನ ಪಾತ್ರ ಎಳ್ಳಷ್ಟೂ ಇಲ್ಲ. ಸಿಎಂ ರಾಜೀನಾಮೆ ಕೇಳಿದ್ರೆ ನಾನು ಕೊಡಲು ಸಿದ್ದ ಅಂದಿದ್ದಾರೆ. ಇಷ್ಟೇ ಅಲ್ಲ, ತನಿಖೆಗೆ ನಾನು ಸಂಪೂರ್ಣವಾಗಿ ಸಹಕರಿಸುತ್ತೇನೆ ಎಂದಿದ್ದಾರೆ.
ಇದೆಲ್ಲದರ ಮಧ್ಯೆ ಬಿಜೆಪಿ ದದ್ದಲ್ ರಾಜಿನಾಮೆ ಕೇಳುತ್ತಿದೆ. ಆದರೆ ಸಂಪುಟದ ಸಚಿವರು ಕೂಡ ದದ್ದಲ್ ಹಾಗೂ ಶರಣ ಪ್ರಕಾಶ್ ಪಾಟೀಲ್ ಪರ ಬ್ಯಾಟ್ ಬೀಸಿದ್ದಾರೆ. ಅದೇನೇ ಇರಲಿ, ವಾಲ್ಮೀಕಿ ನಿಗಮದಲ್ಲಾದ ಹಗರಣ ಹಲವರಿಗೆ ಉರುಳಾಗಿರೋದಂತೂ ಸತ್ಯ. ಎಸ್ ಐಟಿ ಮತ್ತು ಸಿಬಿಐ ತನಿಖೆಯಿಂದ ಮತ್ತ್ಯಾರ ತಲೆದಂಡವಾಗುತ್ತೋ ಅನ್ನೋದು ಕಾದುನೋಡಬೇಕಾಗಿದೆ.