ಹುಬ್ಬಳ್ಳಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸರ್ಕಾರಕ್ಕೆ ಉರುಳಾಗುತ್ತೆ. ನಿಗಮದ ಹಗರಣದಿಂದ ಸರ್ಕಾರ ಬಿದ್ದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಬಾಂಬ್ ಹಾಕಿದ್ದಾರೆ. ವಾಲ್ಮೀಕಿ ನಿಗಮದ ಅಭಿವೃದ್ಧಿ ಹಗರಣ ಸರ್ಕಾರಕ್ಕೆ ಉರುಳಾಗೋದು ಖಚಿತ. ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರ ಹದ್ದು ಮೀರಿದೆ.
ಕೇವಲ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟರೆ ಸಾಲದು. ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು. ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಹಗರಣ ನಡೆದಿದೆ. ಫೈನಾನ್ಸ್ ಮಿನಿಸ್ಟರ್ ಅವರೇ ಇದಾರೆ. ಅವರ ಗಮನಕ್ಕೆ ಇರಲಾರದೆ ಹಗರಣ ನಡೆಯತ್ತಾ? ಎಂದು ಮಹೇಶ್ ಟೆಂಗಿನಕಾಯಿ ಪ್ರಶ್ನಿಸಿದ್ದಾರೆ.
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
‘ನಾಗೇಂದ್ರ ಅವರನ್ನು ಬಲಿ ಕೊಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಸ್ಥಿತಿ ಬಂದಿದೆ. ಸರ್ಕಾರದಲ್ಲಿ 40 ಪರ್ಸೆಂಟ್ ಅಲ್ಲ, 60 ಪರ್ಸೆಂಟ್ ಕಮಿಷನ್ ಆಗಿದೆ. ರಾಜೀನಾಮೆ ಕೊಡೋದು ಅಷ್ಟೆ ಅಲ್ಲ, ಇವರೆಲ್ಲ ಒಳಗೆ ಹೋಗ್ತಾರೆ ಎಂದು ಬಸನಗೌಡ ದದ್ದಲ್ ರಾಜೀನಾಮೆ ವಿಚಾರವಾಗಿ ಟೆಂಗಿನಕಾಯಿ ಪ್ರತಿಕ್ರಿಯಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಯಾಕೆ ಹೈದ್ರಾಬಾದ್ ಗೆ ಹೋಯ್ತು..? ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ನಾಲ್ಕೈದು ಮಂತ್ರಿಗಳಷ್ಟೇ ಅಲ್ಲ, ಮುಖ್ಯಮಂತ್ರಿಗಳೇ ರಾಜಿನಾಮೆ ಕೊಡುವ ಪ್ರಸಂಗ ಬರುತ್ತೆ’ ಎಂದರು.