ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮೊದಲ ಆರೋಪಿ. ಅವರು ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಈ ಹಗರಣದ ಹಿಂದೆ ಕೇವಲ ಸಚಿವರಾಗಿದ್ದ ಬಿ.ನಾಗೇಂದ್ರ ಅವರೊಬ್ಬರೇ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ ಎಂದು ಆಪಾದಿಸಿದರು. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು.
![Demo](https://ainlivenews.com/wp-content/uploads/2023/12/spoorthi-1.jpg)
Robbery Case: ಸಿಲಿಕಾನ್ ಸಿಟಿಯಲ್ಲಿ ಬಿಡು ಬಿಟ್ಟ ತುಪ್ಪ ಕದಿಯೋ ಗ್ಯಾಂಗ್..! ಸೂಪರ್ ಮಾರ್ಕೆಟ್ʼಗಳೆ ಇವರ ಟಾರ್ಗೆಟ್
ಸಿದ್ದರಾಮಯ್ಯ ಅವರಿಗೆ ಆರ್ಥಿಕತೆಯ ಬಗ್ಗೆ ಗೊತ್ತಿದೆಯೇ? ಇಲಾಖೆಯ ಮೇಲೆ ಅವರಿಗೆ ಹಿಡಿತವಿಲ್ಲವೇ? ಈ ಹಣ ಹೈದ್ರಾಬಾದ್ಗೆ ಹೋಗಿದ್ದು ತಿಳಿದರೂ ಬೇರೆಯವರ ವಿರುದ್ದ ಕಠಿಣ ಕ್ರಮ ವಹಿಸಿಲ್ಲ. ದಲಿತರ ಹಣವನ್ನು ವಾಪಸ್ ಮಾಡದಿದ್ದರೆ ಜನರ ಶಾಪ ತಟ್ಟಲಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿ ಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿ ಯಲಿದೆ ಎಂದು ತಿಳಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)