ಶ್ರೀನಗರ: ವಾಹನವೊಂದು 300 ಅಡಿ ಕಣಿವೆಗೆ ಉರುಳಿ ಬಿದ್ದ ಪರಿಣಾಮ 10 ಜನ ಸಾವಿಗೀಡಾದ ಘಟನೆ ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ನಡೆದಿದೆ. ರಾಂಬನ್ ಜಿಲ್ಲೆಯ ಬ್ಯಾಟರಿ ಚೆಶ್ಮಾ ಎಂಬ ಸ್ಥಳದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರೆಲ್ಲ ಶ್ರೀನಗರಕ್ಕೆ ತೆರಳುತ್ತಿದ್ದ ವಲಸೆ ಕಾರ್ಮಿಕರು ಎಂದು ತಿಳಿದು ಬಂದಿದೆ.
ವಾಸ್ತು ಪ್ರಕಾರ ಮನೆಯಲ್ಲಿ ಬಿದಿರುಗಳನ್ನು ಈ ರೀತಿಯಾಗಿ ಇಟ್ಟುಕೊಂಡರೆ ಅದೃಷ್ಟವಂತೆ.!
ಭಾರೀ ಮಳೆಯ ನಡುವೆ, ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕರ್ತರು ಮತ್ತು ಪೊಲೀಸರು ಮೃತದೇಹಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.