ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದರು. ಈ ಮಾತಿಗೆ ನಗಬೇಕೋ, ಅಳಬೇಕೋ ಗೊತ್ತಾಗ್ತಿಲ್ಲ. ಮೋದಿ ಬಗ್ಗೆ ಹಗುರವಾಗಿ ಮಾತಾಡಿದರೆ ದೊಡ್ಡವರಾಗುತ್ತೇವೆ ಎನ್ನುವ ಭಾವನೆ ಇದ್ದರೆ ಅದು ಖಂಡಿತ ಸಾಧ್ಯವಿಲ್ಲ. ಇಂತಹ ಮಾತು ಕಡಿಮೆ ಮಾಡಿ, ನಿಮ್ಮ ಸಿಎಂ ಸ್ಥಾನಕ್ಕೆ ಗೌರವ ತರಲ್ಲ ಎಂದು ಕಿಡಿಕಾರಿದರು.
Cucumber: ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಇಷ್ಟೆಲ್ಲಾ ಲಾಭಗಳಿದ್ಯಾ..? ಇಲ್ಲಿದೆ ಫುಲ್ ಡೀಟೇಲ್ಸ್
ಮೋದಿ ಹೆಸರು ಹೇಳಿ ಮತ ಕೇಳಿದ್ರೆ ಕಪಾಳಮೋಕ್ಷ ಮಾಡಿ ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆ ವಿಚಾರಕ್ಕೆ, ಸಚಿವ ಸ್ಥಾನಕ್ಕೆ ಮತ್ತು ಪಕ್ಷಕ್ಕೆ ಇದು ಶೋಭೆ ತರಲ್ಲ. ಅತಿರೇಕದ ಪರಾಮಾವಧಿ. ಹಗುರವಾದ ಮಾತುಗಳನ್ನು ಆಡಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಎಲ್ಲರೂ ಒಮ್ಮತದಿಂದ ಜಗದೀಶ್ ಶೆಟ್ಟರ್ ಅವರನ್ನು ಬಹು ದೊಡ್ಡ ಅಂತರದಲ್ಲಿ ಗೆಲ್ಲಿಸುವ ಭರವಸೆ ನೀಡಿದ್ದಾರೆ. ನನಗೂ ವಿಶ್ವಾಸವಿದ್ದು, ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ. ಈ ಸಲ 28 ಕ್ಷೇತ್ರ ಗೆಲ್ಲಿಸಬೇಕು ಎನ್ನುವುದು ನಮ್ಮ ಗುರಿ ಎಂದರು.