ವಿಜಯನಗರ:– ಹರಪನಹಳ್ಳಿ ತಾಲೂಕಿನ ಒಡೆಯರಹಳ್ಳಿ ಗ್ರಾಮದಲ್ಲಿ ಬೀದಿ ದೀಪ ಸರಿಪಡಿಸಲು ಹೋಗಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ಜರುಗಿದೆ.
37 ವರ್ಷದ ರೇಣುಕಪ್ಪ ಮೃತದುರ್ದೈವಿ ಎನ್ನಲಾಗಿದೆ. ಗ್ರಾಮ ಪಂಚಯಾತಿ ಸಿಬ್ಬಂದಿ ಸೂಚನೆ ಮೇರೆಗೆ ರೇಣುಕಪ್ಪ ವಿದ್ಯುತ್ ಕಂಬ ಹತ್ತಿ ದೀಪ ಸರಿಪಡಿಸುತ್ತಿದ್ದರು. ಈ ವೇಳೆ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ರೇಣುಕಪ್ಪ ಗ್ರಾಮದಲ್ಲಿ ವಿದ್ಯುತ್ ಪಂಪ್ ಸೆಟ್ ಹಾಗೂ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ರೇಣಕಪ್ಪ ಅವರಿಗೆ ಬೀದಿ ದೀಪ ಸರಿಪಡಿಸುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ