ತುಮಕೂರು: ನಾಲ್ಕೈದು ದಿನಗಳಿಂದ ನೀರಿಲ್ಲದೇ ಗ್ರಾಮಸ್ಥರು ಪರದಾಟ ನಡೆಸುತ್ತಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ನರಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಲ್ಕೈದು ದಿನಗಳಿಂದ ಕುಡಿಯಲು ಹಾಗೂ ದನ ಕರುಗಳಿಗೂ ನೀರಿಲ್ಲದೆ ಪರದಾಟ ನಡೆಸುತ್ತಿದ್ದಾರೆ.
ಖಾಲಿ ಬಿಂದಿಗೆ ಹಿಡಿದು ಗ್ರಾಮದ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದು, ಗ್ರಾಪಂ ಪಿಡಿಓಗೆ ಕರೆ ಮಾಡಿದ್ರೂ ಸ್ಪಂದಿಸುತ್ತಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ. ಕೂಡಲೇ ಗ್ರಾಮದಲ್ಲಿ ನೀರು ಸರಬರಾಜು ಮಾಡಲು ಒತ್ತಾಯ ಮಾಡಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)