ಹುಬ್ಬಳ್ಳಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರು ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರು ಸಿಟ್ಟಿನಲ್ಲಿ ಈ ರೀತಿ ಟೀಕೆ ಮಾಡುತ್ತಿದ್ದಾರೆ ಎಂದು ರಾಜ್ಯ ವಿಧಾನ ಸಭಾ ವಿರೋಧ ಪಕ್ಷದ ಉಪ ನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಸಮಾಜಾಯಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ವಿನಯ ಕುಲಕರ್ಣಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಹಿಟ್ಲರ್ ಹೋಲಿಕೆ ವಿಚಾರ, ಎಲ್ಲರಿಗೂ ಅತ್ಯಂತ ಪ್ರೀತಿಯಿಂದ ಸಿಗುವ ನಾಯಕ ಪ್ರಹ್ಲಾದ್ ಜೋಶಿ ಅವರು ಆಗಿದ್ದು, ನಮಗೆಲ್ಲರಿಗೂ ಮಾದರಿ ಯಾದಂತಹ ಕಾರ್ಯಕರ್ತ ಪ್ರಹ್ಲಾದ್ ಜೋಶಿ ಅವರು ಹೀಗಾಗಿ ಹಿಟ್ಲರ್ ಜೊತೆ ಅವರಿಗೆ ಹೋಲಿಕೆ ಸರಿಯಾದುದ್ದಲ್ಲ ನಮ್ಮ ಪಕ್ಷದ ಕಾರ್ಯಕರ್ತರು ಎಲ್ಲ ಸಂಘ ಸಂಸ್ಥೆಗಳಲ್ಲಿ ಬೆಳೆದಿದ್ದಾರೆ.
ಹಿಂದಿ ಪ್ರಚಾರ ಸಭೆಯಲ್ಲಿ ನಮ್ಮ ಅಜ್ಜ ಸೇರಿದಂತೆ ಹಲವು ಮುಖಂಡರು ಕೆಲಸ ಮಾಡಿದ್ದಾರೆ. ಹೊಸ ನೀರು ಬರುತ್ತೆ ಹಳೇ ನೀರು ಹೋಗುತ್ತೆ ಎಂದರು. ಇನ್ನು ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಕಾಂಗ್ರೆಸ್ ಬಾಹ್ಯ ಬೆಂಬಲ ವಿಚಾರವಾಗಿ ಮಾತನಾಡಿದ ಅವರು, ಅವರಿಗೆ ಬಾಹ್ಯ ಬೆಂಬಲವಾದರೂ ಕೊಡಲಿ ಅಥವಾ ಕಾಂಗ್ರೆಸ್ ಪಕ್ಷದಿಂದಾದರೂ ಕಣಕ್ಕಿಳಿಸಲಿ, ಅದು ಅವರಿಗೆ ಬಿಟ್ಟದ್ದು ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ನಾವು ಜನರ ಬಳಿ ಹೋಗುತ್ತೇವೆ. ಯಾರು ಏನೇ ತಿಪ್ಪರಲ್ಲಾಗ ಹೊಡೆದರೂ ಪ್ರಹ್ಲಾದ್ ಜೋಶಿ ಗೆಲ್ಲುತ್ತಾರೆ ಮೋದಿ ಪ್ರಧಾನಿಯಾಗುತ್ತಾರೆ ಜೋಶಿಯವರಿಂದ ಲಿಂಗಾಯತ ನಾಯಕರಿಗೆ ಅನ್ಯಾಯ ಆರೋಪ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟ ಅವರು ಪ್ರಲ್ಹಾದ್ ಜೋಶಿಯವರು ಯಾರಿಗೂ ಅನ್ಯಾಯ ಮಾಡಿಲ್ಲ ಎಂದರು
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)