ಕುಸ್ತಿ ಪಟು ವಿನೇಶ್ ಫೋಗಟ್ ಬೆಳ್ಳಿ ಪದಕದ ಕನಸು ಭಗ್ನವಾಗಿದ್ದು, ಸಿಎಎಸ್ ಅರ್ಜಿ ವಜಾಗೊಳಿದೆ. ಅನರ್ಹತೆ ಪ್ರಶ್ನಿಸಿ, ಬೆಳ್ಳಿ ಪದಕಕ್ಕೆ ಪರಿಗಣಿಸುವಂತೆ ಕೋರಿ ಇತ್ತೀಚೆಗೆ ವಿನೇಶ್ ಫೋಗಟ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಾದ, ಪ್ರತಿವಾದ ಆಲಿಸಿದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.
ಕೌಟುಂಬಿಕ ಕಲಹ: ಪತ್ನಿಯನ್ನು ಸ್ಮಶಾನಕ್ಕೆ ಕರೆದೊಯ್ದು ಕೊಲೆಗೈದ ಪಾಪಿ ಗಂಡ!
ಸೆಮಿಫೈನಲ್ವರೆಗೂ ಕಟ್ಟುನಿಟ್ಟಾಗಿ ನಿಯಮ ಪಾಲಿಸಿ ಗೆದ್ದಿದ್ದ ವಿನೇಶ್, ಫೈನಲ್ಗೆ ಲಗ್ಗೆ ಇಟ್ಟಿದ್ದರು. ಆದರೆ ಕೇವಲ 100 ಗ್ರಾಂ ತೂಕ ಹೆಚ್ಚಾಗಿರೋದ್ರಿಂದ ಫೈನಲ್ನಿಂದ ಅನರ್ಹಗೊಳಿಸಲಾಗಿತ್ತು. ಫೈನಲ್ನಲ್ಲಿ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಕೋರ್ಟ್ ಆಫ್ ಆರ್ಬಿಟ್ರೇಶನ್ನಲ್ಲಿ ವಿನೇಶ್ ಫೋಗಟ್ ಅರ್ಜಿ ಸಲ್ಲಿಸಿದ್ದರು. ತನಗೆ ಕನಿಷ್ಠ ಬೆಳ್ಳಿ ಪದಕವನ್ನಾದ್ರೂ ನೀಡುವಂತೆ ಒತ್ತಾಯಿಸಿದ್ದರು. ಹೀಗಾಗಿ, ನಿನ್ನೆ ಮೂರನೇ ಬಾರಿಗೆ ಬೆಳ್ಳಿ ಪದಕ ನೀಡುವ ವಿಚಾರವಾಗಿ ಅಂತಾರಾಷ್ಟ್ರೀಯ ಕ್ರೀಡಾ ಮಧ್ಯಸ್ಥಿಕೆ ಕೋರ್ಟ್ ವಿಚಾರಣೆ ಮಾಡಿದ್ದು, ತೀರ್ಪು ಮುಂದೂಡಿತ್ತು.
ವಿನೇಶ್ ಫೋಗಟ್ ಅನರ್ಹಗೊಂಡ ಬಳಿಕ ಅನೇಕ ಕ್ರೀಡಾಪಟುಗಳು, ರಾಜಕೀಯ ನಾಯಕರು, ಕೇಂದ್ರ ಸರ್ಕಾರ ಹಾಗೂ ವಿಪಕ್ಷಗಳು ಅವರು ಬೆಂಬಲಕ್ಕೆ ನಿಂತಿದ್ದರು. ವಿನೇಶ್ಗೆ ನ್ಯಾಯ ಒದಗಿಸಬೇಕು. ಕನಿಷ್ಠ ಬೆಳ್ಳಿ ಪದಕವನ್ನಾದರೂ ನೀಡಬೇಕು ಅಂತ ಆಗ್ರಹಿಸಿ ಅಭಿಯಾನ ಕೂಡ ಮಾಡಲಾಗಿತ್ತು.