ಸಿಎಸ್ಕೆ ಮಾಜಿ ಬ್ಯಾಟರ್ ಅಂಬಾಟಿ ರಾಯುಡು ನಾನಾ ರೀತಿಯಲ್ಲಿ ಆರ್ಸಿಬಿ ತಂಡವನ್ನು ಗೇಲಿ ಮಾಡಿ ಕಾಲೆಳೆಯುತ್ತಾ ಬಂದಿದ್ದಾರೆ. ಈಗ ಒಂದು ಹೆಜ್ಜೆ ಮುಂದಿಟ್ಟಿರುವ ಅಂಬಾಟಿ ರಾಯುಡು, ಆರ್ಸಿಬಿ ತಂಡ ಇಷ್ಟು ವರ್ಷ ಒಮ್ಮೆಯೂ ಟ್ರೋಫಿ ಗೆಲ್ಲದೇ ಇರುವುದಕ್ಕೆ ವಿರಾಟ್ ಕೊಹ್ಲಿ ಮತ್ತು ತಂಡದ ಆಟಗಾರರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮೇ 18ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತನ್ನ ಕಡೇ ಲೀಗ್ ಪಂದ್ಯದಲ್ಲಿ ಸಿಎಸ್ಕೆ ಎದುರು 27 ರನ್ಗಳ ಭರ್ಜರಿ ಜಯ ದಾಖಲಿಸಿ ಪ್ಲೇ ಆಫ್ಸ್ಗೆ ಅರ್ಹತೆ ಪಡೆಯಿತು. ಇದಾದ ಬಳಿಕ ಆರ್ಸಿಬಿ ಅಭಿಮಾನಿಗಳು ಬೀದಿ ಬೀದಿಯಲ್ಲಿ ಸಂಭ್ರಮಾಚರಣೆ ನಡೆಸಿದ್ದನ್ನು ಕಂಡ ಅಂಬಾಟಿ ರಾಯುಡುಗೆ ಅದನ್ನು ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಆರ್ಸಿಬಿ vs ಸಿಎಸ್ಕೆ ಪಂದ್ಯ ಮುಗಿದು 6 ದಿನಗಳು ಕಳೆದಿದ್ದರೂ ಅಂಬಾಟಿ ರಾಯುಡುಗೆ ಆ ಆಘಾತದಿಂದ ಇನ್ನೂ ಹೊರಬರಲು ಸಾಧ್ಯವಾಗಿಲ್ಲ.
![Demo](https://ainlivenews.com/wp-content/uploads/2023/12/spoorthi-1.jpg)
500 Note Update: ನಿಮ್ಮ ಬಳಿ 500 ರೂಪಾಯಿ ನೋಟು ಇದ್ಯಾ..? ಕ್ಷಣಮಾತ್ರದಲ್ಲಿ ನೀವು ಆಗ್ಬೋದು ಮಿಲಿಯನೇರ್
ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ಸಿಬಿ ಎಲಿಮಿನೇಟರ್ ಪಂದ್ಯ ಸೋತ ಬಳಿಕ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಂಬಾಟಿ ರಾಯುಡು ವಿಡಿಯೋ ಒಂದನ್ನು ಹಂಚಿಕೊಂಡು ‘5 ಬಾರಿ ಚಾಂಪಿಯನ್ಸ್ ಯಾರು ಎಂಬುದನ್ನು ಕೆಲವೊಮ್ಮೆ ತೋರಿಸಿಕೊಡಬೇಕಾಗುತ್ತದೆ’ ಎಂದು ಅಡಿಬರಹ ಬರೆದಿದ್ದರು. ಅವರೊಟ್ಟಿಗೆ ಕೈ ಜೋಡಿಸಿದ್ದ ಸಿಎಸ್ಕೆ ಆಟಗಾರರಾದ ದೀಪಕ್ ಚಹರ್, ಮತೀಶ ಪತಿರಣ ಮತ್ತು ತುಶಾರ್ ದೇಶಪಾಂಡೆ ಕಾಮೆಂಟ್ ಬಾಕ್ಸ್ನಲ್ಲಿ ಆರ್ಸಿಬಿ ತಂಡವನ್ನು ಗೇಲಿ ಮಾಡಿದ್ದಾರೆ.
ಇದಾದ ಬೆನ್ನಲ್ಲೇ ನೆಟ್ ಲೋಕದಲ್ಲಿ ಕ್ರಿಕೆಟ್ ಪ್ರಿಯರು ಅಂಬಾಟಿ ರಾಯುಡು ಅವರನ್ನು ತರಹೇವಾರಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಲವರು ರಾಯುಡು ಅವರ ಅಸಲಿ ಯೋಗ್ಯತೆ ಏನೆಂಬುದನ್ನು ಮನದಟ್ಟು ಮಾಡಿಕೊಟ್ಟಿದ್ದಾರೆ ಕೂಡ. ಈ ಬೆಳವಣಿಗೆ ಬಳಿಕ ಟ್ವೀಟ್ ಒಂದನ್ನು ಮಾಡಿರುವ ಅಂಬಾಟಿ ರಾಯುಡು ಆರ್ಸಿಬಿ ಅಭಿಮಾನಿಗಳ ಮನ ಗೆಲ್ಲುವ ಪ್ರಯತ್ನ ಮಾಡಿ, ತಂಡದ ಟ್ರೋಫಿ ಬರಕ್ಕೆ ವಿರಾಟ್ ಕೊಹ್ಲಿ ಮತ್ತು ಸಂಗಡ ಕಾರಣ ಎಂದು ಆರೋಪ ಮಾಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)