ಕಾರವಾರ:- ಲೋಕಸಭಾ ಲೋಕಸಭಾ ಚುನಾವಣೆ 2024 ರ ಟಿಕೆಟ್ ಸಿಕ್ಕ ಬೆನ್ನಲ್ಲೇ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಸುದೀರ್ಘ ರಾಜಕೀಯ ಅನುಭವದ ಹಿನ್ನೆಲೆಯಲ್ಲಿ ತನಗೆ ಟಿಕೆಟ್ ಸಿಕ್ಕಿದೆ, ದೇಶಕ್ಕಾಗಿ ಅದ್ಭುತವಾವ ಸಾಧನೆಗಳನ್ನು ಮಾಡಿರುವ ಪ್ರಧಾನಿ ಮೋದಿಯರವ ಜೊತೆ ಕೆಲಸ ಮಾಡುವ ಸೌಭಾಗ್ಯ ತನಗೆ ಸಿಕ್ಕಿದೆ, ಅವರ ಸಾಧನೆಗಳು ಜನಸಾಮಾನ್ಯರಿಗೂ ತಲುಪಿವೆ ಹಾಗಾಗಿ ದಾಖಲೆ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಮತ್ತು ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಅದೇ ವೇಗದಲ್ಲಿ ಮುಂದುವರಿಯಲಿವೆ ಎಂದು ಕಾಗೇರಿ ಹೇಳಿದರು. ಅನಂತ ಕುಮಾರ್ ಹೆಗಡೆ ಮತ್ತು ತಾನು ಜೊತೆಯಾಗಿ ಕೆಲಸ ಮಾಡುತ್ತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಎಲ್ಲರಿಗೂ ತಲುಪಿಸಿದ್ದೇವೆ, ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅವರಿಗೆ ಅಪಾರವಾದ ಅನುಭವ ಇದೆ, ಅವರ ಸಲಹೆ ಸೂಚನೆ ಕೇಳುವುದಾಗಿ ಕಾಗೇರಿ ಹೇಳಿದರು.